ಬೆಂಗಳೂರು: ಪಾರ್ಟ್‌ಟೈಂ ಕೆಲಸದ ಸೋಗಲ್ಲಿ 1.07 ಲಕ್ಷ ವಂಚನೆ, ಕಂಗಾಲಾದ ಯುವತಿ

Published : Feb 16, 2024, 01:17 PM ISTUpdated : Feb 16, 2024, 01:19 PM IST
ಬೆಂಗಳೂರು: ಪಾರ್ಟ್‌ಟೈಂ ಕೆಲಸದ ಸೋಗಲ್ಲಿ 1.07 ಲಕ್ಷ ವಂಚನೆ, ಕಂಗಾಲಾದ ಯುವತಿ

ಸಾರಾಂಶ

ಅಕ್ಕಿಪೇಟೆ ಮುಖ್ಯರಸ್ತೆಯ ಭುವ ನೇಶ್ವರಿ ಎಂಬುವವರು ನೀಡಿದ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿ ಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ.

ಬೆಂಗಳೂರು(ಫೆ.16):  ಪಾರ್ಟ್ ಟೈಂ ಕೆಲಸದ ಸೋಗಿನಲ್ಲಿ ಸೈಬರ್ ವಂಚಕರು ಯುವತಿಯಿಂದ ₹1.07 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಕಿಪೇಟೆ ಮುಖ್ಯರಸ್ತೆಯ ಭುವ ನೇಶ್ವರಿ (26) ಎಂಬುವವರು ನೀಡಿದ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿ ಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ.

ಏನಿದು ದೂರು?: 

ದೂರುದಾರೆ ಭುವನೇಶ್ವರಿ ಅವರು ಚಾಮರಾಜಪೇಟೆಯ ಖಾಸಗಿ ಬ್ಯಾಂಕ್‌ವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಶೈಲ ಎಂಬ ವ್ಯಕ್ತಿ ಭುವನೇಶ್ವರಿ ವಾಟ್ಸಾಪ್‌ಗೆ ಎಚ್.ಆರ್.ಮ್ಯಾನೇಜ‌ರ್ ಎಂಬ ಸಂದೇಶ ಬಂದಿದೆ. ಅದರಲ್ಲಿ ಮನೆಯಲ್ಲಿ ಕುಳಿತು ಮಾಡುವ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ತಿಳಿಸಿ ದ್ದಾರೆ. ಇದಕ್ಕೆ ಭುವನೇಶ್ವರಿ ಅವರು ಒಪ್ಪಿದ ಬಳಿಕ ಟೆಲಿಗ್ರಾಮ್ ಗ್ರೂಪ್‌ಗೆ ಸೇರಿಸಿದ್ದಾರೆ. ಬಳಿಕ ಗೂಗಲ್ ಫಾರ್ಮ್ ಭರ್ತಿ ಮಾಡುವ ಕೆಲಸ ಮಾಡಿಸಿಕೊಂಡು ಭುವನೇಶ್ವರಿಗೆ ₹300 ಹಾಕಿದ್ದಾರೆ. ನಂತರ ಟೆಲಿಗ್ರಾಮ್ ಆ್ಯಪ್‌ನಲ್ಲಿ ಒಂದು ಟಾಸ್ಕ್‌ ಇದ್ದು, ₹850 ಹಾಕಿದರೆ, ಅದಕ್ಕೆ ₹250 ಸೇರಿಸಿ ನೀಡುವುದಾಗಿ ಹೇಳಿದ್ದಾರೆ. ಅದರಂತೆ ಭುವನೇಶ್ವರಿ ಅವರು ₹850 ಹಾಕಿದ್ದಾರೆ.

ಶಿವಮೊಗ್ಗ ಸುಂದರಿ ಸನ್ನಿಧಿಯ ರೀಲ್ಸ್ ನೋಡಿ, ಹಿಂದೆ ಬೀಳುವ ಮಲೆನಾಡು ಯುವಕರೇ ಎಚ್ಚರ!

ಇದಕ್ಕೆ ಪ್ರತಿ ಯಾಗಿ ₹1,100 ನೀಡಲಾಗಿದೆ. ಇದೇ ರೀತಿ ಭುವನೇಶ್ವರಿ ಅವರಿಂದ ವಿವಿಧ ಹಂತಗಳಲ್ಲಿ ಒಟ್ಟು ₹1.07 ಲಕ್ಷ ಹಾಕಿಸಿ ಕೊಳ್ಳಲಾಗಿದೆ. ಬಳಿಕ ಈ ಹಣವನ್ನು ವಾಪಾಸ್ ಕೇಳಿದ್ದಕ್ಕೆ ₹1.40 ಲಕ್ಷ ಹಾಕಿದರೆ ₹1.70 ಲಕ್ಷ ವಾಪಾಸ್ ಕೊಡುವುದಾಗಿ ಹೇಳಿದ್ದಾರೆ.

ಎಚ್ಚೆತ್ತುಕೊಂಡ ಭುವನೇಶ್ವರಿ ಮತ್ತೆ ಹಣ ಹಾಕುವ ಗೋಜಿಗೆ ಹೋಗಿಲ್ಲ. ತಾನು ಸೈಬರ್ ವಂಚಕರ ಬಲೆಗೆ ಬಿದ್ದಿರುವುದು ಅರಿವಾಗಿ ಕಾಟನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು