ಬೆಂಗಳೂರು: ಒಂದೇ ಮನೆ 12 ಜನಕ್ಕೆ ಲೀಸ್‌, 1 ಕೋಟಿ ವಂಚನೆ!

Published : Dec 20, 2024, 06:00 AM IST
ಬೆಂಗಳೂರು: ಒಂದೇ ಮನೆ 12 ಜನಕ್ಕೆ ಲೀಸ್‌, 1 ಕೋಟಿ ವಂಚನೆ!

ಸಾರಾಂಶ

ಚೋಳನಗರದ ಗಿರೀಶ್ ಬಂಧಿತನಾಗಿದ್ದು, ಆತನಿಂದ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ವಂಚನೆ ಬಗ್ಗೆ ಖಾಸಗಿ ಕಂಪನಿ ಉದ್ಯೋಗಿಗಳಾದ ಮಹೇಂದ್ರ, ರಮ್ಯಾ ಹಾಗೂ ಕೀರ್ತಿ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು(ಡಿ.20): ಬಾಡಿಗೆ ಕೊಟ್ಟಿದ್ದ ಮನೆಯನ್ನೇ ಖಾಲಿ ಇದೆ ಎಂದು ಹೇಳಿ ಭೋಗ್ಯಕ್ಕೆ ಕೊಡುವುದಾಗಿ ನಂಬಿಸಿ 12 ಜನರಿಂದ ₹1.09 ಕೋಟಿ ವಸೂಲಿ ಮಾಡಿ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಚೋಳನಗರದ ಗಿರೀಶ್ ಬಂಧಿತನಾಗಿದ್ದು, ಆತನಿಂದ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ವಂಚನೆ ಬಗ್ಗೆ ಖಾಸಗಿ ಕಂಪನಿ ಉದ್ಯೋಗಿಗಳಾದ ಮಹೇಂದ್ರ, ರಮ್ಯಾ ಹಾಗೂ ಕೀರ್ತಿ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳಿವೆ ಎಂದು ಕಂಡುಹಿಡಿಯುವುದು ಹೇಗೆ?

ಕಳೆದ ನವೆಂಬರ್‌ನಲ್ಲಿ ಮನೆ ಭೋಗ್ಯ ನೀಡುವ ನೆಪದಲ್ಲಿ ವಂಚಿಸಿರುವ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ 3 ಎಫ್‌ಐಆರ್‌ಗಳು ದಾಖಲಾಗಿದ್ದವು. ನೋ ಬ್ರೋಕರ್ ಆ್ಯಪ್‌ನಲ್ಲಿ ತಮ್ಮ ಮನೆ ಭೋಗ್ಯಕ್ಕಿಡಲಾಗಿದೆ ಎಂದು ವಿವರವನ್ನು ಆರೋಪಿ ಪ್ರಕಟಿಸಿದ್ದ. ಈ ವಿವರ ನೋಡಿ ತನ್ನನ್ನು ಸಂಪರ್ಕಿ ಸುವ ಜನರಿಗೆ ಮನೆ ಖಾಲಿ ಇದೆ ಎಂದು ನಂಬಿಸಿ ಚೋಳದ ನಗರದಲ್ಲಿ 2 ಅಂತಸ್ತಿನ ಮನೆ ಕಟ್ಟಡವಿದ್ದು. ಕೆಳ ಹಂತದಲ್ಲಿ ಗಿರೀಶ್ ಕುಟುಂಬ ನೆಲೆಸಿದೆ. ಇನ್ನುಳಿದ 2 ಹಂತದ ಮನೆಗಳನ್ನು ಆತ ಬಾಡಿಗೆ ಕೊಟ್ಟಿದ್ದಾನೆ. ಹೀಗಿದ್ದರು ಮನೆ ಖಾಲಿ ಇದೆ ಎಂದು ಹೇಳಿ ಜನರಿಗೆ ಆತ ವಂಚಿಸುತ್ತಿದ್ದ. ಪ್ರತಿ ಯೊಬ್ಬರಿಗೆ ಒಂದೊಂದು ಕಾರಣ ಕೊಟ್ಟು ಆರೋಪಿ ಹಣ ಪಡೆದಿದ್ದ ಎಂದು ಡಿಸಿಪಿ ಹೇಳಿದ್ದಾರೆ.

ಏನಿದು ಬಾಡಿಗೆ ದಂಧೆ? 

• ಬಾಡಿಗೆ ಕೊಟ್ಟ ಮನೆಯನ್ನೇ ಖಾಲಿ ಇದೆ ಎಂದೇಳಿ ಜನರಿಂದ ಸುಲಿಗೆ 
• ನೋ ಟ್ರೋಕರ್ ಆ್ಯಪ್‌ನಲ್ಲಿ ಮನೆ ಮಾಹಿತಿ ನೀಡಿ ಹಣ ಪಡೆಯುತ್ತಿದ್ದ 
• 2 ಅಂತಸ್ತಿನ ಮನೆಯಲ್ಲಿ ಒಂದು ಅಂತಸ್ತಿನ ಮನೆ ಬಾಡಿಗೆ ನೀಡಿ ಮೋಸ 
• ಪ್ರತಿಯೊಬ್ಬರಿಗೂ ಒಂದೊಂದು ಕಾರಣ ಹೇಳಿ ಹಣ ವಂಚನೆ 
• ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ದಾಖಲು

ಬೆಂಗಳೂರು ಏರ್ಪೋರ್ಟ್ ಟ್ಯಾಕ್ಸಿ: ಊಬರ್ ಆ್ಯಪ್‌ ಹೆಸರಲ್ಲಿ ವಂಚನೆ

ಒಂದು ವರ್ಷದಲ್ಲಿ 12 ಜನರಿಂದ ₹1.09 ಕೋಟಿ ವಸೂಲಿ: ₹55 ಲಕ್ಷ ವಾಪಸ್

ಕಳೆದೊಂದು ವರ್ಷದ ಅವಧಿಯಲ್ಲಿ ಮನೆ ಭೋಗ್ಯದ ಹೆಸರಿನಲ್ಲಿ ಸುಮಾರು 12 ಜನರಿಂದ 1.09 ಕೋಟಿ ಹಣವನ್ನು ಗಿರೀಶ್ ವಸೂಲಿ ಮಾಡಿದ್ದ. ಈ ಹಣದ ಪೈಕಿ 55 ಲಕ್ಷ ರು. ಹಣವನ್ನು ಆತ ಮರಳಿಸಿದ್ದು, ಉಳಿದ 54 ಲಕ್ಷ ರುಪಾಯಿ ಇನ್ನೂ ಬಾಕಿ ಇದೆ. ಒಬ್ಬೊಬ್ಬರಿಂದ 8 ರಿಂದ 10 ಲಕ್ಷವರೆಗೆ ಆತ ವಸೂಲಿ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ಮೊದಲು ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಆತ, ಬಳಿಕ ಅಲ್ಲಿ ಕೆಲಸ ತೊರೆದು ಕ್ಯಾಟರಿಂಗ್ ಸರ್ವೀಸ್ ಮಾಡುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ. ಆನಂತರ ಸುಲಭವಾಗಿ ಹಣ ಸಂಪಾದನೆಗೆ ಆತ ವಂಚನೆ ಕೃತ್ಯಕ್ಕಿಳಿದ್ದ. ಈಗಾಗಲೇ ಒಂದು ವಂಚನೆ ಪ್ರಕರಣದಲ್ಲಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಪಡೆದು ಹೊರಬಂದ ನಂತರ ಮತ್ತೆ ತನ್ನ ಚಾಳಿಯನ್ನು ಗಿರೀಶ್ ಮುಂದುವರೆಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!