ಮುಂಬೈ ಏರ್‌ಪೋರ್ಟ್‌ನಲ್ಲಿ ಮಣಿಪಾಲ್‌ ಕಂಪನಿ ನಿರ್ದೇಶಕರ 1 ಲಕ್ಷ ರು. ಕಳವು: ನಿಲ್ದಾಣ ಸಿಬ್ಬಂದಿಯ ಕೈವಾಡ

Published : Jan 13, 2024, 01:00 AM IST
ಮುಂಬೈ ಏರ್‌ಪೋರ್ಟ್‌ನಲ್ಲಿ ಮಣಿಪಾಲ್‌ ಕಂಪನಿ ನಿರ್ದೇಶಕರ 1 ಲಕ್ಷ ರು. ಕಳವು: ನಿಲ್ದಾಣ ಸಿಬ್ಬಂದಿಯ ಕೈವಾಡ

ಸಾರಾಂಶ

ಮುಂಬೈಯ ವಿಮಾನ ನಿಲ್ದಾಣದಲ್ಲಿ ಚೆಕ್‌ ಇನ್‌ಗೆಂದು ಬ್ಯಾಗ್‌ ನೀಡಿದ್ದ ವೇಳೆ ಮಂಗಳೂರಿನ ಮಣಿಪಾಲ್‌ ಗ್ರೂಪ್‌ನ ಕಂಪನಿಯೊಂದರ ನಿರ್ದೇಶಕ ಬಿನೋದ್‌ ಕುಮಾರ್‌ ಮಂಡಲ್‌ (46) ಅವರ ಬ್ಯಾಗ್‌ನಲ್ಲಿದ್ದ 1 ಲಕ್ಷ ರು. ನಗದು ಹಾಗೂ 78 ವರ್ಷಗಳಷ್ಟು ಹಳೆಯ 5,000 ರು. ಬೆಲೆಯ ಫೌಂಟೇನ್‌ ಪೆನ್ನು ಕಳ್ಳತನವಾಗಿದೆ.  

ಮುಂಬೈ/ಮಂಗಳೂರು (ಜ.13): ಮುಂಬೈಯ ವಿಮಾನ ನಿಲ್ದಾಣದಲ್ಲಿ ಚೆಕ್‌ ಇನ್‌ಗೆಂದು ಬ್ಯಾಗ್‌ ನೀಡಿದ್ದ ವೇಳೆ ಮಂಗಳೂರಿನ ಮಣಿಪಾಲ್‌ ಗ್ರೂಪ್‌ನ ಕಂಪನಿಯೊಂದರ ನಿರ್ದೇಶಕ ಬಿನೋದ್‌ ಕುಮಾರ್‌ ಮಂಡಲ್‌ (46) ಅವರ ಬ್ಯಾಗ್‌ನಲ್ಲಿದ್ದ 1 ಲಕ್ಷ ರು. ನಗದು ಹಾಗೂ 78 ವರ್ಷಗಳಷ್ಟು ಹಳೆಯ 5,000 ರು. ಬೆಲೆಯ ಫೌಂಟೇನ್‌ ಪೆನ್ನು ಕಳ್ಳತನವಾಗಿದೆ.

ಮಂಗಳೂರಿನಿಂದ ಮುಂಬೈಗೆ ವಿಮಾನದಲ್ಲಿ ತೆರಳಿದ ಬಳಿಕ ಮುಂಬೈನ ವಿಮಾನ ಸಿಬ್ಬಂದಿಗಳಿಂದಲೇ ತಮ್ಮ ಬ್ಯಾಗ್‌ ಕಳ್ಳತನವಾಗಿದೆ. 1 ಲಕ್ಷ ರು. ನಗದು ಹಾಗೂ 1946ರಲ್ಲಿ ನಮ್ಮ ತಾತ ಖರೀದಿಸಿದ್ದ 5000 ರು. ಬೆಲೆಯ ಫೌಂಟೇನ್‌ ಪೆನ್ನು ಇದರಲ್ಲಿ ಸೇರಿವೆ ಎಂದು ಬಿನೋದ್‌ ಆರೋಪಿಸಿದ್ದಾರೆ. ಅಲ್ಲದೇ ಈ ಸಂಬಂಧ ಪೊಲೀಸರಲ್ಲಿ ಪ್ರಕರಣ ದಾಖಲಿಸಲು ಮುಂಬೈಯಲ್ಲಿ 5 ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಆಂಗ್ಲ ಪತ್ರಿಕೆಯೊಂದರ ಎದುರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಲತ ಪಶ್ಚಿಮ ಬಂಗಾಳದ ಕೋಲ್ಕತಾದವರಾಗಿರುವ ಬಿನೋದ್, ‘ನಾನು ಮಣಿಪಾಲ್‌ ಸಮೂಹದಲ್ಲಿ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. 2 ದಿನಗಳ ಕೆಲಸಕ್ಕೆಂದು ಅವರು ಮುಂಬೈಗೆ ತೆರಳಿದ್ದೆ. ನಿಲ್ದಾಣಕ್ಕೆ ಬಂದಿಳಿದ ಬಳಿಕ ಚೆಕ್‌ ಇನ್‌ ಆಗಿದ್ದ ಬ್ಯಾಗ್‌ನ ಲಾಕ್‌ ಓಪನ್‌ ಆಗಿದ್ದನ್ನು ಕಂಡು ಕಳ್ಳತನವಾಗಿದ್ದು ಪತ್ತೆಯಾಗಿದೆ. ಅದಕ್ಕೆ ನಂಬರ್‌ ಲಾಕ್‌ ಇದ್ದರೂ, ಅನ್‌ಲಾಕ್‌ ಮಾಡಿ ಜಿಪ್‌ ತೆರೆದಿದ್ದಾರೆ’ ಎಂದು ದೂರಿದ್ದಾರೆ.

ಅಯೋಧ್ಯೆ ರಾಮ ಮಂದಿರ ಆಹ್ವಾನದಲ್ಲಿ ರಾಜಕಾರಣ ಸಲ್ಲ: ಸಂಸದ ಪ್ರಜ್ವಲ್ ರೇವಣ್ಣ

ನಿಲ್ದಾಣ ಸಿಬ್ಬಂದಿಯಿಂದಲೇ ಕಳವು?: ಈ ಬಗ್ಗೆ ಮಾತನಾಡಿರುವ ಬಿನೋದ್‌ ಅವರು ‘ನನ್ನ ಬ್ಯಾಗ್‌ ಕಳ್ಳತನದಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿಗಳ ಕೈವಾಡವಿದೆ. ಇಲ್ಲದಿದ್ದರೆ ಕಳ್ಳತನ ಸಂಭವಿಸುತ್ತಿರಲಿಲ್ಲ. ಲಗೇಜ್ ಸ್ಕ್ಯಾನಿಂಗ್ ಮಾಡುವವರು ಲೋಡರ್‌ಗೆ, ಬ್ಯಾಗ್‌ನಲ್ಲಿ ನಗದು ಹಾಗೂ ಪೆನ್‌ ಇರುವ ಸುಳಿವು ನೀಡಿರಬಹುದು. ಬಳಿಕ ಸಿಸಿಟಿವಿ ಕವರೇಜ್ ಇಲ್ಲದ ಸ್ಥಳದಲ್ಲಿ ನಗದು ಕದಿಯಲಾಗಿದೆ ಎಂದು ನಾನು ಶಂಕಿಸುತ್ತೇನೆ’ ಎಂದು ಬಿನೋದ್‌ ಹೇಳಿದ್ದಾರೆ. ‘ನಾನು 1 ಲಕ್ಷ ರು. ಇಟ್ಟ ಬಗ್ಗೆ ನನ್ನ ಹತ್ತಿರ ಬ್ಯಾಂಕ್‌ ವಿತ್‌ಡ್ರಾ ರಸೀದಿಯ ಸಾಕ್ಷ್ಯವಿದೆ’ ಎಂದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ