
ಕೊಪ್ಪಳ(ಅ.25): ದುಷ್ಕರ್ಮಿಗಳ ತಂಡವೊಂದು ಹತ್ತು ವರ್ಷದ ಬಾಲಕನ ಕೈ ಕಾಲು ಕಟ್ಟಿ ಕಾಲುವೆಗೆ ಹಾಕಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ. ಮಲ್ಲಿಕಾರ್ಜುನ ಎಂಬಾತನೇ ಕೊಲೆಗೀಡಾದ ಬಾಲಕನಾಗಿದ್ದಾನೆ.
ಮೃತ ಮಲ್ಲಿಕಾರ್ಜುನ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ನಜೀರ್ ಕಾಲೋನಿ ನಿವಾಸಿಯಾಗಿದ್ದು, ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದನು. ಈ ಸಂಬಂಧ ಬಾಲಕನ ಪೋಷಕರು ಪೊಲೀಸ್ ಠಾಣೆಯಲ್ಲಿನ ದೂರು ನೀಡಿದ್ದರು.
ಕೊಪ್ಪಳ: ಕೊಲೆ ಪ್ರಕರಣ ಭೇದಿಸುವ ನೆಪದಲ್ಲಿ ಅಮಾಯಕರಿಗೆ ಥಳಿತ?
ಇದೀಗ ರಾಯಚೂರು ಜಿಲ್ಲೆಯ ಸಿಂಧನೂರು ಸಮೀಪ ಮಲ್ಲಿಕಾರ್ಜುನ ಮೃತ ದೇಹ ಪತ್ತೆಯಾಗಿದೆ. ಬಾಲಕನಿಗೆ ಈಜು ಬರುತ್ತೆ ಅನ್ನೋದು ಗೊತ್ತಿದ್ದ ದುಷ್ಕರ್ಮಿಗಳು ಕೈ ಕಾಲು ಕಟ್ಟಿ ಕಾಲುವೆಗೆ ಎಸೆದು ಕೊಲೆ ಮಾಡಿದ್ದಾರೆ. ಬಾಲಕನ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ