
ತೆಲಂಗಾಣದಲ್ಲಿ ತಾಯಿ ತನ್ನ 11 ತಿಂಗಳ ಮಗುವಿಗೆ ವಿಷ ನೀಡಿ, ಆ ನಂತರ ತಾನೂ ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಯಶವಂತ ರೆಡ್ಡಿ ಎಂಬಾತ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ರಾಮಣ್ಣಪೇಟೆಯ ನಿವಾಸಿ . ಈತನಿಗೆ ವಿವಾಹವಾಗಿದ್ದು, ಸುಶ್ಮಿತಾ ಎಂಬ ಪತ್ನಿ ಇದ್ದರು. ದಂಪತಿಗೆ 11 ತಿಂಗಳ ವಯಸ್ಸಿನ ಮಗುವಿದೆ. ಇದೀಗ ಕೌಟುಂಬಿಕ ಕಲಹದಿಂದಾಗಿ ಸುಶ್ಮಿತಾ ತಮ್ಮ ಮಗುವಿಗೆ ವಿಷ ನೀಡಿ ಕೊಂದಿದ್ದಾರೆ.
ದಂಪತಿಗಳು ಹಸ್ತಿನಾಪುರದ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದರು. ಮಗು ಜನಿಸಿದಾಗಿನಿಂದ ಯಶವಂತ್ ಸುಶ್ಮಿತಾಳನ್ನು ಹೊರಗೆ ಹೋಗದಂತೆ ಮತ್ತು ಯಾರೊಂದಿಗೂ ಮಾತನಾಡದಂತೆ ಕಿರುಕುಳ ನೀಡುತ್ತಿದ್ದ. ಇದರಿಂದಾಗಿ ಗಂಡ ಮತ್ತು ಹೆಂಡತಿಯ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು. ಇದರಿಂದಾಗಿ ತೀವ್ರವಾಗಿ ಮಾನಸಿಕವಾಗಿ ನೊಂದಿದ್ದ ಸುಶ್ಮಿತಾ ಪತಿ ಕಚೇರಿಗೆ ಹೋದಾಗ ತನ್ನ 11 ತಿಂಗಳ ಮಗುವಿಗೆ ವಿಷ ನೀಡಿ ಕೊಂದಿದ್ದಾಳೆ.
ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆ ಮಾಡಿಕೊಂಡ ಸುಷ್ಮಿತಾ
ಮಗುವನ್ನು ಕೊಂದ ನಂತರ ಆಕೆಯೂ ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾಳೆ. ಇದನ್ನು ನೋಡಿದ ಸುಶ್ಮಿತಾಳ ತಾಯಿ ಲಲಿತಾ (50 ವರ್ಷದ ಮಹಿಳೆ) ಕೂಡ ವಿಷ ಸೇವಿಸಿ ಆತ್ಮ*ಹ*ತ್ಯೆಗೆ ಯತ್ನಿಸಿದರು. ಆದರೆ ನೆರೆಹೊರೆಯ ಸಾರ್ವಜನಿಕರು ಲಲಿತಾಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಆಕೆಗೆ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ತಾಯಿ ಮತ್ತು ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಷ್ಮಿತಾ ಅವರ ಸಂಬಂಧಿಕರು ಪತಿಯ ಕಿರುಕುಳದಿಂದಾಗಿಯೇ ಸುಶ್ಮಿತಾ ಈ ವಿಚಿತ್ರ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ