
ಬೆಂಗಳೂರು, (ಜುಲೈ.30): ಆಟವಾಡುತ್ತಿದ್ದ 12 ವರ್ಷದ ಬಾಲಕ ಆಕಸ್ಮಿಕವಾಗಿ ಅಪಾರ್ಟ್ಮೆಂಟ್ ನ 2ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದ ಎಂಎಲ್ ಎ ಲೇಔಟ್ನ ಸಿವಿಕೆ ಮೀನಾಕ್ಷಿ ಅಪಾರ್ಟ್ ಮೆಂಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಅದಿತ್ ಮೃತಪಟ್ಟ ಬಾಲಕ.
ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಶನಿವಾರ ಆಗಿದ್ದರಿಂದ ಶಾಲೆಯಿಂದ ಮಧ್ಯಾಹ್ನ ಮರಳಿದ ನಂತರ 2ನೇ ಮಹಡಿಯ ಬಾಲ್ಕನಿಯಲ್ಲಿ ಅದಿತ್ ಆಟವಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ