
ಕಲಬುರಗಿ(ಜ.28): ಹನ್ನೆರಡು ವರುಷದ ಬಾಲಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂಚೋಳಿ ತಾಲೂಕಿನ ಕುಂಚಾವರಂ ಬಲಿಯ ಲಕ್ಷ್ಮಾಸಾಗರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಸಾವನ್ನಪ್ಪಿರುವ ಬಾಲಕನನ್ನು ಮಧುಕರ ಲಕ್ಷ್ಮಪ್ಪ ಎಂದು ಗುರುತಿಸಲಾಗಿದೆ. ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಎಂದಿನಂತೆ ದನ ಮೇಯಿಸಲು ಅಡವಿಗೆ ಹೋಗಿದ್ದ ಬಾಲಕ ಮಧುಕರ ದನಗಳನ್ನು ತಮ್ಮ ಪಾಡಿಗೆ ಮೇಯಲು ಬಿಟ್ಟು ಪಕ್ಕದ ಹಳ್ಳಿಯಲ್ಲಿನ ಜಾತ್ರೆಗೆ ಸಂಗಡಿಗರೊಂದಿಗೆ ಹೋಗಿದ್ದ. ಮನೆಗೆ ಮರಳಿದಾಗ ಆಕಳೊಂದು ಮನೆಗೆ ಬಾರದ ಸಂಗತಿ ಗೊತ್ತಾಯ್ತು.
ಹೊಸದಾಗಿ ಮದುವೆಯಾಗಿದ್ದ ಸೊಸೆ ನಿಗೂಢ ಸಾವಿನ ನಂತರ ಅತ್ತೆಯ ಶವವೂ ಪತ್ತೆ!
ಪೋಷಕರು ಬೈಯುತ್ತಾರೆಂದು ಹೆದರಿ ಮಧುಕರ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಪ್ರಾಥಮಿಕ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಕುಂಚಾವರಂ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ