ಕಲಬುರಗಿ: ಬೆಳ್ಳಂಬೆಳಗ್ಗೆ ಎಟಿಎಂ ಒಡೆದು ₹14 ಲಕ್ಷ ದೊಚಿದ ಖತರ್ನಾಕ್ ಗ್ಯಾಂಗ್!

Published : Jul 24, 2023, 07:01 AM IST
ಕಲಬುರಗಿ: ಬೆಳ್ಳಂಬೆಳಗ್ಗೆ ಎಟಿಎಂ ಒಡೆದು ₹14 ಲಕ್ಷ ದೊಚಿದ ಖತರ್ನಾಕ್ ಗ್ಯಾಂಗ್!

ಸಾರಾಂಶ

ಅಫಜಲ್ಪುರ ಪಟ್ಟಣದ ಕಾಳಿಕಾ ಮಂದಿರದ ಬಳಿ ಇರುವ ಕೆನರಾ ಬ್ಯಾಂಕ್‌ ಎಟಿಎಂ ಎಂದಿನಂತಿರಲಿಲ್ಲ. ನಸುಕಿನ ಜಾವ ಬಡಾವಣೆ ಜನ ಎದ್ದು ನೋಡಿದಾಗ ಎಟಿಎಂ ಸೆಟರ್‌ ಒಡೆದಿದ್ದು ಕಂಡು ಬಂತು. ಬ್ಯಾಂಕಿನವರು ವಿಷಯ ತಿಳಿದು ಬಂದು ನೋಡಿದಾಗ ಕಳ್ಳರು ಎಟಿಎಂ ಒಡೆದು 14.86 ಲಕ್ಷ ದೋಚಿಕೊಂಡು ಪರಾರಿಯಾಗಿದ್ದು ಕಂಡು ಬಂದಿದೆ.

ಚವಡಾಪುರ (ಜು.24) :  ಅಫಜಲ್ಪುರ ಪಟ್ಟಣದ ಕಾಳಿಕಾ ಮಂದಿರದ ಬಳಿ ಇರುವ ಕೆನರಾ ಬ್ಯಾಂಕ್‌ ಎಟಿಎಂ ಎಂದಿನಂತಿರಲಿಲ್ಲ. ನಸುಕಿನ ಜಾವ ಬಡಾವಣೆ ಜನ ಎದ್ದು ನೋಡಿದಾಗ ಎಟಿಎಂ ಸೆಟರ್‌ ಒಡೆದಿದ್ದು ಕಂಡು ಬಂತು. ಬ್ಯಾಂಕಿನವರು ವಿಷಯ ತಿಳಿದು ಬಂದು ನೋಡಿದಾಗ ಕಳ್ಳರು ಎಟಿಎಂ ಒಡೆದು 14.86 ಲಕ್ಷ ದೋಚಿಕೊಂಡು ಪರಾರಿಯಾಗಿದ್ದು ಕಂಡು ಬಂದಿದೆ.

ಘಟನೆ ಸಂಬಂಧ ಬ್ಯಾಂಕ್‌ ಮ್ಯಾನೇಜರ್‌ ಹಣಮಂತ್ರಾಯ ದೇಗಾಂವ ಅಫಜಲ್ಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪಟ್ಟಣದ ಕಾಳಿಕಾ ದೇವಸ್ಥಾನದ ಬಳಿ ಇರುವ ರಾಮಭಟ್‌ ಅಗ್ನಿಹೋತ್ರಿ ಎನ್ನುವವರ ಕಟ್ಟಡದಲ್ಲಿ ಬಾಡಿಗೆ ಪಡೆದು ಕೆನರಾ ಬ್ಯಾಂಕ್‌ ನಡೆಸಲಾಗುತ್ತಿದೆ. ನಾವು ಎಂದಿನಂತೆ ಬ್ಯಾಂಕ್‌ ಬಂದ್‌ ಮಾಡಿಕೊಂಡು ಹೋಗಿದ್ದೇವು.

 

Cyber Crime: ಅಕೌಂಟ್‌ನಲ್ಲಿ ಹಣ ಇಲ್ದೇ ಇದ್ರು ಎಟಿಎಂನಿಂದ 9 ಕೋಟಿ ತೆಗೆದ.. ಮುಂದೆ..!?

ಬೆಳಗ್ಗೆ 4 ಗಂಟೆಗೆ ನಮ್ಮ ಸಿಬ್ಬಂದಿ ಎಟಿಎಂ ಕಳ್ಳತನವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 3.24 ಗಂಟೆಗೆ ನಾಲ್ಕು ಜನ ಅಪರಿಚಿತ ಕಳ್ಳರು ಬಿಳಿ ಬಣ್ಣದ ಬೊಲೇರೋ ವಾಹನದಲ್ಲಿ ಬಂದು ಬ್ಯಾಂಕಿನ ಬಳಿ ಇರುವ ಸಿಸಿಟಿವಿ ಕ್ಯಾಮರಾಗೆ ಸ್ಪ್ರೇ ಸಿಂಪಡಿಸಿ ತಮ್ಮ ಮುಖಕ್ಕೆ ಬಟ್ಟೆಕಟ್ಟಿಕೊಂಡು ಮುಖ ಕಾಣದಂತೆ ಮಾಡಿ ಗ್ಯಾಸ್‌ ಕಟರ್‌ ಸಹಾಯದಿಂದ ಎಟಿಎಂ ಯಂತ್ರ ಕತ್ತರಿಸಿ ಅದರಲ್ಲಿನ ಹಣದ ಟ್ರೇ ಸಮೇತ 3.33 ನಿಮಿಷಕ್ಕೆ ಪರಾರಿಯಾಗಿದ್ದಾರೆ. ಕೇವಲ ಒಂಭತ್ತು ನಿಮಿಷಗಳ ಅಂತರದಲ್ಲೇ ಕಳ್ಳರು ಕೈಚಳಕ ತೋರಿದ್ದಾರೆ.

Bengaluru crime: ಎಟಿಎಂನಿಂದ₹.24 ಲಕ್ಷ ದೋಚಿದ್ದವರ ಸೆರೆ

ಎಟಿಎಂನಲ್ಲಿ ಕಳ್ಳತನವಾಗುವ ಮುನ್ನ 17,08,500 ರುಪಾಯಿ ಇದ್ದು ಇದರಲ್ಲಿ ಕಳ್ಳತನಕ್ಕೂ ಮುನ್ನ ಗ್ರಾಹಕರು 2,22,500 ರುಪಾಯಿಗಳನ್ನು ಡ್ರಾ ಮಾಡಿಕೊಂಡಿದ್ದಾರೆ. ಉಳಿದ 14 ಲಕ್ಷ 86 ಸಾವಿರ ರುಪಾಯಿಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ. ದೂರಿನ ಅನ್ವಯ ಸ್ಥಳಕ್ಕೆ ಹೆಚ್ಚುವರಿ ಎಸ್‌.ಪಿ ಶ್ರೀನಿಧಿ, ಡಿವೈಎಸ್‌ಪಿ ಗೋಪಿ ಆರ್‌, ಸಿಪಿಐ ರಾಜಶೇಖರ ಬಡದೇಸಾರ, ಪಿಎಸ್‌ಐ ಭೀಮರಾಯ ಬಂಕ್ಲಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರೀಶಿಲನೆ ನಡೆಸಿ ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ