ಅಳುತ್ತಾ, ಕಿರುಚಾಡಿದ್ರೂ ಬಿಡದ ಪಾಪಿಗಳು, 14 ವರ್ಷದ ಬಾಲಕಿ ಹೊತ್ತೊಯ್ದ ಮದುವೆ !

Published : Mar 10, 2025, 10:29 AM ISTUpdated : Mar 10, 2025, 10:38 AM IST
ಅಳುತ್ತಾ, ಕಿರುಚಾಡಿದ್ರೂ ಬಿಡದ ಪಾಪಿಗಳು, 14 ವರ್ಷದ ಬಾಲಕಿ ಹೊತ್ತೊಯ್ದ ಮದುವೆ !

ಸಾರಾಂಶ

ತಮಿಳುನಾಡಿನಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿ ಅಪಹರಿಸಲಾಗಿದೆ. ಬಾಲಕಿ ಕಿರುಚಾಡಿದರೂ ಬಿಡದೆ ಎಳೆದೊಯ್ದ ಘಟನೆ ನಡೆದಿದೆ, ಆರೋಪಿಗಳನ್ನು ಬಂಧಿಸಲಾಗಿದೆ.

ತಮಿಳುನಾಡು / ಆನೇಕಲ್ (ಮಾ.10): ಕರ್ನಾಟಕ ರಾಜ್ಯದ ಗಡಿಭಾಗದ ಪ್ರದೇಶ ತಮಿಳುನಾಡಿಗೆ ಸೇರುವ ಊರಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಇಡೀ ಸಮಾಜವೇ ತಲೆತಗ್ಗಿಸುವಂತಹ ಪ್ರಕರಣ ಇದಾಗಿದೆ. 14 ವರ್ಷದ ಬಾಲಕಿಯನ್ನ ಮದುವೆಯಾಗಿ ಹೊತ್ತೊಯ್ದ ಘಟನೆ ನಡೆದಿದೆ. ಬಾಲಕಿ ಕಿರುಚಾಟ ನಡೆಸಿದರೂ, ಆಕೆಯನ್ನು ಬಿಡದೆ ಪಾಪಿಗಳು ಎಳೆದೊಯ್ದಿದ್ದಾರೆ. ಬಾಲಕಿ ಅಳುತ್ತಾ, ಕಿರುಚಾಡಿದರೂ ಬಿಡದೆ ಕಾಡು ಮೃಗಗಳ ರೀತಿ ವರ್ತನೆ ಮಾಡಿದ್ದಾರೆ. ಕರ್ನಾಟಕ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಅಂಚೆಟ್ಟಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಏಳನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯ ವಿವಾಹ ಮಾಡಲಾಗಿದೆ. ಬಾಲಕಿ ತಾಯಿಯ ಸ್ವಂತ ತಮ್ಮನ ಜೊತೆ ಬಾಲಕಿಗೆ ಬಾಲ್ಯವಿವಾಹ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಬಾಲಕಿಗೆ ಇಷ್ಟವಿಲ್ಲದೇ ಇದ್ದರೂ ಬಲವಂತವಾಗಿ ಪೋಷಕರು ಮದುವೆ ಮಾಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಬೆಂಗಳೂರಿನಲ್ಲಿ ಈ ಬಾಲ್ಯವಿವಾಹ ನಡೆದಿದೆ. ಬಾಲ್ಯವಿವಾಹ ಮುಗಿಸಿ ಎಲ್ಲರೂ ಅಂಚೆಟ್ಟಿಯ ಬಾಲಕಿ ಮನೆಗೆ ಬಂದಿದ್ದರು. ಅಲ್ಲಿಂದ ಬಾಲಕಿಯನ್ನ ಯುವಕನ ಮನೆಗೆ ಕರೆದುಕೊಂಡು ಹೋಗಲು ಯತ್ನಿಸಲಾಗಿದೆ. ಬಾಲಕಿ ಒಪ್ಪದೆ ಇದ್ದಾಗ ಭುಜದ ಮೇಲೆ ಆಸಾಮಿಗಳು ಹೊತ್ತೊಯ್ದಿದ್ದಾರೆ. ದಾರಿಯುದ್ದಕ್ಕೂ ಬಾಲಕಿ ಕಿರುಚಾಡಿದರೂ ಪಾಪಿಗಳು ಬಿಟ್ಟಿಲ್ಲ.ಬಾಲಕಿ ಕಣ್ಣೀರು ಹಾಕಿ ಗೋಳಾಡಿದರೂ ಪಾಪಿಗಳ ಮನಸ್ಸು ಕರಗಿಲ್ಲ.

17ರ ಬಾಲಕಿಗೆ ಮದುವೆ ಮಾಡಿದ್ದಕ್ಕೆ ಹೈಕೋರ್ಟ್ ಗರಂ!

ಈ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಡೆಂಕಣಿಕೋಟೆ ಮಹಿಳಾ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಬಾಲ್ಯ ವಿವಾಹವಾಗಿದ್ದ ಮಾದೇಶ್, ಆತನ ಅಣ್ಣ ಮಲ್ಲೇಶ್, ಪತ್ನಿ ಮುನಿಯಮ್ನಲ್, ಬಾಲಕಿ ತಾಯಿ ನಾಗಮ್ಮ, ಸಂಬಂಧಿ ಮುನಿಯಪ್ಪನ್‌ರನ್ನು ಬಂಧಿಸಲಾಗಿದ್ದು, ಎಲ್ಲರ ವಿರುದ್ಧವೂ ಪೋಕ್ಸೋ ಕೇಸ್‌ ದಾಖಲು ಮಾಡಲಾಗಿದೆ.

ಎಲ್ಲಾ ರಾಜ್ಯಗಳಲ್ಲೂ ಬಾಲ್ಯವಿವಾಹ ಹೆಚ್ಚಳ! ಸುಪ್ರೀಂ ಗರಂ, ಕಠಿಣ ಆದೇಶ


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ