
ಮುಂಬೈ ( ಆಗಸ್ಟ್ 15 , 2023): ಮಹಾರಾಷ್ಟ್ರದ ಮುಂಬೈನ ಉಪನಗರ ಖಾರ್ನಲ್ಲಿ 6 ವರ್ಷದ ಬಾಲಕಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 16 ವರ್ಷದ ಹುಡುಗನನ್ನು ಸೋಮವಾರ ವಶಕ್ಕೆ ಪಡೆಯಲಾಗಿದೆ. ಚಾಕೊಲೇಟ್ ಕೊಡಿಸೋ ಆಮಿಷ ಒಡ್ಡಿ ಬಾಲಕಿಯನ್ನು ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾನುವಾರ ಸಂಜೆ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಹದಿಹರೆಯದ ಹುಡುಗ ಅವಳ ಬಳಿಗೆ ಬಂದು ಚಾಕೊಲೇಟ್ ಆಮಿಷ ಒಡ್ಡಿದನು. ಆತ ಆಕೆಯನ್ನು ತನ್ನ ಕೋಣೆಗೆ ಕರೆದೊಯ್ದು ಅಲ್ಲಿ ಅಪರಾಧ ಎಸಗಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆ ಒಂದೇ ಪ್ರದೇಶದ ನಿವಾಸಿಗಳು ಎಂದು ಅವರು ಹೇಳಿದರು. “ಘಟನೆಯ ನಂತರ, ಸಂತ್ರಸ್ತೆ ಹೆದರಿ ಅಳಲು ಪ್ರಾರಂಭಿಸಿದಳು. ಆಕೆಯ ಪೋಷಕರು ಕಾರಣವನ್ನು ಕೇಳಿದಾಗ, ಅವಳು ಘಟನೆಯನ್ನು ವಿವರಿಸಿದ್ದಾಳೆ’’ ಎಂದು ಅಧಿಕಾರಿ ಹೇಳಿದರು.
ಇದನ್ನು ಓದಿ: ಮಲತಾಯಿ ಅಂದ್ರೆ ಹಿಂಗೇನಾ? ಬಾಲಕನಿಗೆ ಶಾಲೆಗೆ ಹೋಗದಂತೆ ತಡೆದು ತಂದೆಯಿಂದ ದೇಹದ ಹಲವೆಡೆ ಬರೆ ಹಾಕಿಸಿದ ಪಾಪಿ!
ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) 377 (ಅಸ್ವಾಭಾವಿಕ ಅಪರಾಧಗಳು) ಮತ್ತು ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೇರಿದಂತೆ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಇನ್ನು, ಈ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದೇ ರೀತಿ, ಮಹಾರಾಷ್ಟ್ರದ ಕಲ್ಯಾಣ್ ಬಳಿ ಒಂದು ವರ್ಷ ಮತ್ತು 10 ತಿಂಗಳ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 15 ವರ್ಷದ ಬಾಲಕನ ವಿರುದ್ಧ ಪೊಲೀಸರು ಕಳೆದ ವಾರ ಪ್ರಕರಣ ದಾಖಲಿಸಿದ್ದರು. ದೂರು ದಾಖಲಿಸಿದ ಮಗುವಿನ ತಾಯಿ ಪ್ರಕಾರ, ಆಕೆಯ ಮತ್ತು ಹುಡುಗನ ಕುಟುಂಬಸ್ಥರು ನೆರೆಹೊರೆಯವರು. ಶುಕ್ರವಾರ ಸಂಜೆ, ಅವರು ಹತ್ತಿರದ ದಿನಸಿ ಅಂಗಡಿಯಿಂದ ಸ್ವಲ್ಪ ಸಕ್ಕರೆ ತರಲು ಹುಡುಗನನ್ನು ಕೇಳಿದ್ದರು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಹೆಂಡ್ತಿಗೆ ಇನ್ಸ್ಟಾಗ್ರಾಮ್ನಲ್ಲಿ ಹೆಚ್ಚು ಫಾಲೋವರ್ಸ್: ಅಸೂಯೆಯಿಂದ ಮಕ್ಕಳ ಎದುರೇ ಪತ್ನಿ ಕೊಂದ ಉದ್ಯಮಿ
"ಸಕ್ಕರೆ ಪ್ಯಾಕೆಟ್ ನೀಡಿದ ನಂತರ, ಹುಡುಗ ಹುಡುಗಿಯನ್ನು ನೋಡಿದನು ಮತ್ತು ಅವಳೊಂದಿಗೆ ಆಟವಾಡಲು ಪ್ರಾರಂಭಿಸಿದನು. ಅಷ್ಟರಲ್ಲಿ ಸಂತ್ರಸ್ತೆಯ ಅಮ್ಮ ಅಡುಗೆ ಮನೆಗೆ ಹೋದಳು. ಸುತ್ತಲೂ ಯಾರೂ ಇಲ್ಲದಿರುವುದನ್ನು ಕಂಡು ಬಾಲಕಿಯ ಖಾಸಗಿ ಅಂಗಗಳಲ್ಲಿ ತನ್ನ ಬೆರಳುಗಳನ್ನು ಸೇರಿಸಿದನು. ಆಕೆ ಜೋರಾಗಿ ಕಿರುಚಿದಾಗ ಬಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಏನೋ ತಪ್ಪಾಗಿದೆ ಎಂದು ಅರಿತ ತಾಯಿ ಬಾಲಕಿಯನ್ನು ವೈದ್ಯರ ಬಳಿ ಕರೆದೊಯ್ದಿದ್ದಾರೆ’’ ಎಂದು ಎಫ್ಐಆರ್ನಲ್ಲಿ ಹೇಳಲಾಗಿದೆ. ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾಳೆ.
ಈ ಸಂಬಂಧ ಮಾಹಿತಿ ನೀಡಿದ ಖಡಕ್ಪಾಡಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಸರ್ಜೆರಾವ್ ಪಾಟೀಲ್ ಪೋಕ್ಸೋ ಕಾಯ್ದೆಗಳ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ನಾಯಕಿ ನಾಪತ್ತೆ ಕೇಸ್ಗೆ ಟ್ವಿಸ್ಟ್: ಕೊಲೆ ಮಾಡಿ ನದಿಗೆ ಡೆಡ್ಬಾಡಿ ಎಸೆದ ಪಾಪಿ ಪತಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ