ವಿಶಾಖಪಟ್ಟಣದ ಕೆಮಿಕಲ್‌ ಫ್ಲಾಂಟ್‌ನಲ್ಲಿ ಅನಿಲ ಸೋರಿಕೆ: 178 ಉದ್ಯೋಗಿಗಳು ಅಸ್ವಸ್ಥ

Published : Jun 04, 2022, 03:59 PM IST
ವಿಶಾಖಪಟ್ಟಣದ ಕೆಮಿಕಲ್‌ ಫ್ಲಾಂಟ್‌ನಲ್ಲಿ ಅನಿಲ ಸೋರಿಕೆ: 178  ಉದ್ಯೋಗಿಗಳು ಅಸ್ವಸ್ಥ

ಸಾರಾಂಶ

ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿ 178ಕ್ಕೂ ಹೆಚ್ಚು ಉದ್ಯೋಗಿಗಳು ಅಸ್ವಸ್ಥರಾದ ಘಟನೆ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (Visakhapatnam) ನಡೆದಿದೆ. 

ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿ 178ಕ್ಕೂ ಹೆಚ್ಚು ಉದ್ಯೋಗಿಗಳು ಅಸ್ವಸ್ಥರಾದ ಘಟನೆ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (Visakhapatnam) ನಡೆದಿದೆ. ವಿಶಾಖಪಟ್ಟಣಂನ ಅಚ್ಯುತಪುರಂನಲ್ಲಿರುವ (Atchutapuram)  ಕೆಮಿಕಲ್‌ ಕಾರ್ಖಾನೆಯಲ್ಲಿ ಈ ಅನಿಲ ಸೋರಿಕೆ ಪ್ರಕರಣ ಸಂಭವಿಸಿದೆ. ಇದು ಪಶುವೈದ್ಯಕೀಯ ಔಷಧಿಗಳ ಕಂಪನಿಯಾದ ಪೋರಸ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್‌ನ (Porus Laboratories Pvt Ltd) ಕೇಂದ್ರ ಸ್ಥಾನವಾಗಿದೆ.  

ರಾಜ್ಯದ ಕೈಗಾರಿಕಾ ಸಚಿವ ಗುಡಿವಾಡ ಅಮರನಾಥ್ (Gudivada Amarnath) ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಪ್ರಸ್ತುತ ಎಲ್ಲಾ ಕಾರ್ಮಿಕರ ಆರೋಗ್ಯ ಸ್ಥಿರವಾಗಿದೆ (ಮತ್ತು) ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ಎಂದು ಅನಕಪಲ್ಲಿ ಎಸ್ಪಿ ಗೌತಮಿ ಸಾಲಿ (Anakapalle SP Gautami) ತಿಳಿಸಿದ್ದಾರೆ. ಅನಿಲ ಸೋರಿಕೆಯ ಮೂಲ ಕಾರಣ ಇನ್ನೂ ದೃಢಪಟ್ಟಿಲ್ಲ  ಈ ಬಗ್ಗೆ ಆಂಧ್ರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Shivamogga: ವಸತಿ ಶಾಲೆಯಲ್ಲಿ ಗ್ಯಾಸ್ ಲೀಕ್: ಹಾಸ್ಟೆಲ್‌ನಿಂದ ಓಡೋಡಿ ಬಂದ ಮಕ್ಕಳು..!

ಪೋರಸ್ ಲ್ಯಾಬೋರೇಟರೀಸ್ ಪ್ರೈವೇಟ್ ಲಿಮಿಟೆಡ್‌ನಿಂದ ಅನಿಲ ಸೋರಿಕೆಯಾಗಿರಬಹುದು ಎಂದು ಮೊದಲಿಗೆ ಭಾವಿಸಲಾಗಿತ್ತು. ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಆಗಮಿಸಿ ಅನಿಲ ಸೋರಿಕೆಯ ಮೂಲವನ್ನು ಗುರುತಿಸುತ್ತಿವೆ. ಮಧ್ಯಾಹ್ನ 12:30ಕ್ಕೆ ಈ ಘಟನೆ ನಡೆದಿದೆ. ಪೋರಸ್ ಪ್ರೈವೇಟ್ ಲಿಮಿಟೆಡ್ ಹೊರತಾಗಿ ಎರಡು ಉಡುಪು ಕಂಪನಿ ಕಾರ್ಖಾನೆಗಳು ಇದೇ ಪ್ರದೇಶದಲ್ಲಿದ್ದು, ಕ್ಯಾಂಪಸ್‌ನಲ್ಲಿರುವ ಗ್ಯಾಸ್‌ ಸೋರಿಕೆಯ ನಂತರ ಅಲ್ಲಿನ ಸಿಬ್ಬಂದಿ ವಾಂತಿ  ಬಂದಂತೆ ಅನಿಸಲು ಶುರುವಾಗಿದ್ದಾಗಿ ದೂರಿದ್ದಾರೆ. ಅನಾರೋಗ್ಯಕ್ಕೆ ಒಳಗಾದವರಲ್ಲಿ ಹೆಚ್ಚಿನವರು ಕ್ಯಾಂಪಸ್‌ನಲ್ಲಿರುವ ಬ್ರಾಂಡಿಕ್ಸ್ ಕಾರ್ಖಾನೆಗೆ ಸೇರಿದವರಾಗಿದ್ದಾರೆ. 

ಅಸ್ವಸ್ಥರನ್ನು  ಅಚ್ಚುತಪುರಂನ ಎರಡು ಖಾಸಗಿ ಆಸ್ಪತ್ರೆಗಳು ಮತ್ತು ಅನಕಪಲ್ಲಿಯ ಎನ್‌ಟಿಆರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆಂಧ್ರಪ್ರದೇಶ (Andhra Pradesh) ಮುಖ್ಯಮಂತ್ರಿ ವೈಎಸ್ ಜಗನ್ ರೆಡ್ಡಿ (YS Jagan Reddy) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸ್ಥಳೀಯ ಸಚಿವರಿಗೆ ಅವರು ಆದೇಶಿಸಿದರು. ಘಟನೆಯ ಕುರಿತು ತನಿಖೆ ನಡೆಸಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

Hosapete: ಎಸಿ ವಿಷಾನಿಲ ಸೋರಿಕೆಯಿಂದ ಮನೆಗೆ ಬೆಂಕಿ: ದಟ್ಟ ಹೊಗೆಯಿಂದ ಹೊರಬರಲಾರದೇ ನಾಲ್ವರ ಸಾವು

ಪೋರಸ್ ಲ್ಯಾಬೋರೇಟರೀಸ್‌ನಲ್ಲಿ ಏಪ್ರಿಲ್‌ನಲ್ಲಿ ಸ್ಫೋಟ ಸಂಭವಿಸಿತ್ತು. ಇದರಲ್ಲಿ ಆರು ಜನರು ಸಾವನ್ನಪ್ಪಿ 15 ಮಂದಿ ಗಾಯಗೊಂಡಿದ್ದರು. ಮೃತರ ಕುಟುಂಬಗಳಿಗೆ ರಾಜ್ಯ ಮತ್ತು ಕಾರ್ಖಾನೆ ಆಡಳಿತದಿಂದ ತಲಾ ₹ 25 ಲಕ್ಷ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಗಾಯಗಳ ಆಧಾರದ ಮೇಲೆ 2 ಲಕ್ಷದಿಂದ 5 ಲಕ್ಷದವರೆಗೆ ಸಿಗಲಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಆಂಧ್ರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾಥಮಿಕ ತನಿಖೆಯ ಪ್ರಕಾರ ಈ ಸ್ಫೋಟದ ಹಿಂದೆ ಅನಿಯಂತ್ರಿತ ಪ್ರತಿಕ್ರಿಯೆಯ ತಾಪಮಾನದಲ್ಲಿ ಹೆಚ್ಚಿನ ಎಕ್ಸೋಥರ್ಮಿಕ್ ಪ್ರತಿಕ್ರಿಯೆ ಇರುವುದಾಗಿ ಹೇಳಿತ್ತು. ಅಲ್ಲದೇ ಮಾಲಿನ್ಯ ನಿಯಂತ್ರಣ ಮಂಡಳಿ(PCB) ಬಲ್ಕ್ ಡ್ರಗ್ ತಯಾರಿಕಾ ಘಟಕವನ್ನು ತಕ್ಷಣವೇ ಮುಚ್ಚುವಂತೆ ಆದೇಶಿಸಿತ್ತು. ಹೈದರಾಬಾದ್ ಮೂಲದ ಪೋರಸ್ ಲ್ಯಾಬೋರೇಟರೀಸ್  ಔಷಧೀಯ ಮಧ್ಯವರ್ತಿಯಾಗಿದ್ದು, ವಿಶೇಷ ರಾಸಾಯನಿಕಗಳ ತಯಾರಿಕೆಯಲ್ಲಿ ತೊಡಗಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಐದು ಘಟಕಗಳನ್ನು ಇದು ಹೊಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು