ಪ್ರೀತ್ಸೆ..ಪ್ರೀತ್ಸೆ ಅಂತ ಯುವತಿಯ ಜೀವ ತಿಂದ ಭಗ್ನ ಪ್ರೇಮಿ...!

Published : Jan 30, 2021, 07:18 PM IST
ಪ್ರೀತ್ಸೆ..ಪ್ರೀತ್ಸೆ ಅಂತ ಯುವತಿಯ ಜೀವ ತಿಂದ ಭಗ್ನ ಪ್ರೇಮಿ...!

ಸಾರಾಂಶ

ಪ್ರೀತ್ಸೆ..ಪ್ರೀತ್ಸೆ ಅಂತ ಯುವಕನೋರ್ವ ಯುವತಿಯ ಪ್ರಾಣ ತಿಂದಿರುವ ಘಟನೆ ನಡೆದಿದೆ. ಯುವಕನ ಕಾಟ ತಾಳಲಾರದೆ ಯುವತಿ ಆತ್ಮಹತ್ಯೆ ಶರಣಾಗಿದ್ದಾಳೆ

ಮಂಡ್ಯ, (ಜ.30): ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನ ಕಿರುಕುಳದಿಂದ ಬೇಸತ್ತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕು ನಗರಕೆರೆ ಗ್ರಾಮದಲ್ಲಿ ನಡೆದಿದೆ. 

ಗ್ರಾಮದ ಸೋನಿಕ (19)  ಎಂಬಾಕೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ. ಅದೇ ಗ್ರಾಮದ ಮಂಜಪ್ಪಗೌಡ ಎಂಬ ಯುವಕ ಕಳೆದ ಹಲವಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. 

ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಪ್ರೇಯಸಿಯ ಕೊಂದ ಪ್ರೇಮಿ!

ಈ ಬಗ್ಗೆ ಆತನಿಗೆ ಬುದ್ದಿ ಹೇಳಿದ್ದರೂ ಕೇಳಿರಲಿಲ್ಲ. ಇದರಿಂದ ಬೇಸತ್ತ ಸೋನಿಕ, ಕೊನೆಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!