
ಖಾನಾಪುರ, (ಡಿ.01) : ಪಾಲಕರು ತನ್ನ ಕಾಲೇಜಿನ ಫೀ ಭರಿಸದ ಕಾರಣ ಮನನೊಂದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀಡಿ ಗ್ರಾಮದ ನಿವಾಸಿ ಮೆಹೇಕ್ ಶಕೀಲ್ ಸಂಗೊಳ್ಳಿ (19) ಮೃತ ವಿದ್ಯಾರ್ಥಿನಿ.
ಗದಗ; ಅನುಮಾನಕ್ಕೆ ಮದ್ದಿಲ್ಲ... ಮಲಗಿದ್ದ ಗಾರ್ಡ್ ಹೆಣವಾಗಿದ್ದ
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಮೆಹೇಕ್ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾಸಗಿ ಕಾಲೇಜಿನಲ್ಲಿ ಕಳೆದ ವರ್ಷ ಪ್ರಥಮ ವರ್ಷದ ಬಿಸಿಎ ಪದವಿ ಪೂರೈಸಿದ್ದಳು.
ಈ ವರ್ಷದ ಕಾಲೇಜು ಫೀ ಭರಿಸಲು ಕೊರೋನಾ ಕಾರಣದಿಂದಾಗಿ ಪಾಲಕರು ವಿಫಲರಾಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ