
ರಾಮನಗರ, (ಅ.10): ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ.
ಅಕ್ಟೋಬರ್ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು (ಶನಿವಾರ) ಪತ್ತೆಯಾಗಿದೆ.
5 ವರ್ಷ ನಂತ್ರ ಪೋಷಕರ ಸೇರಿದ ಮಗು, RCBಗೆ ಸಿತ್ತಾ ಗೆಲುವಿನ ನಗು? ಅ.10ರ ಟಾಪ್ 10 ಸುದ್ದಿ!
ಯುವತಿ ಕಾಣೆಯಾದ ಬೆನ್ನಲ್ಲೇ ಅಕ್ಟೋಬರ್ 9 ರಂದು ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇದೀಗ ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ.
ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಯುವತಿಯ ಬಟ್ಟೆಗಳನ್ನ ಬೇರೆಡೆ ಎಸೆದ ನಂತರ ದುಷ್ಕರ್ಮಿಗಳು ಆಕೆಯನ್ನು ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದು, ಸದ್ಯ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ