
ಬೆಂಗಳೂರು(ಮೇ.27): ಪಿಜಿಯಲ್ಲಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು(ಶನಿವಾರ) ನಡೆದಿದೆ. ಬೀದರ್ ಮೂಲದ ಅಭಿಷೇಕ್(19) ಎಂಬಾತನೇ ಮೃತ ದುರ್ದೈವಿಯಾಗಿದ್ದಾರೆ.
ವಿಜಯನಗರದ ಮಾರೇನಹಳ್ಳಿಯ ಪಿಜಿಯಲ್ಲಿದ್ದ ತನ್ನ ರೂಮಿನಲ್ಲಿ ಪ್ಯಾನಿಗೆ ನೇಣುಬಿಗಿದುಕೊಂಡು ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಏಳು ದಿನಗಳ ಹಿಂದೆ ಕಾಣೆಯಾಗಿದ್ದ ಕೃಷಿಕ; ಅರಣ್ಯಪ್ರದೇಶದಲ್ಲಿ ಮೃತದೇಹ ಪತ್ತೆ!
ಮೃತ ಅಭಿಷೇಕ್ ವಿದ್ಯಾಭ್ಯಾಸದ ಸಲುವಾಗಿ ಪಿಜಿಯಲ್ಲಿ ತಂಗಿದ್ದನಂತೆ. ಅಭಿಷೇಕ್ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆಯಿಂದಷ್ಟೇ ಅಭಿಷೇಕ್ ಸಾವಿಗೆ ಕಾರಣ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ