ರಾಮನಗರ: ಬೆಳ್ಳುಳ್ಳಿ ವ್ಯಾಪಾರ ಮಾಡ ಹೊರಟವನಿಗೆ 2.25 ಲಕ್ಷ ವಂಚನೆ

Published : Jun 09, 2024, 05:14 PM IST
ರಾಮನಗರ: ಬೆಳ್ಳುಳ್ಳಿ ವ್ಯಾಪಾರ ಮಾಡ ಹೊರಟವನಿಗೆ 2.25 ಲಕ್ಷ ವಂಚನೆ

ಸಾರಾಂಶ

ಒಂದು ವಾರ ಕಳೆದರೂ ಬೆಳ್ಳುಳ್ಳಿ ಲೋಡ್ ಬರಲಿಲ್ಲ. ಆ ವ್ಯಕ್ತಿಗಳು ಫೋನ್ ಕರೆಯನ್ನು ಸ್ವೀಕರಿಸದೆ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಮೋಸ ಹೋದ ಮೇಲೆ ಖಾಲಿದ್ ಖಾನ್ ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಮನಗರ(ಜೂ.09):  ಬೆಳ್ಳುಳ್ಳಿ ವ್ಯಾಪಾರ ಮಾಡಲು ಹೋಗಿ ವ್ಯಕ್ತಿಯೊಬ್ಬರು 2.25 ಲಕ್ಷ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಕನಕಪುರ ನಗರದ ಪೈಪ್ ಲೈನ್ ರಸ್ತೆಯಲ್ಲಿನ ಅಜೀಜ್ ನಗರ ಬಡಾವಣೆ ವಾಸಿ ಖಾಲಿದ್ ಖಾನ್ ವಂಚನೆಗೊಳಗಾದವರು. ಕಬ್ಬಿಣದ ವ್ಯಾಪಾರಿಯಾದ ಖಾಲಿದ್ ಖಾನ್ ಬೆಳ್ಳುಳ್ಳಿ ವ್ಯಾಪಾರ ಮಾಡಲು ಕಿಸಾನ್ ಡೀಲ್ಸ್ ಆಪ್ ನಲ್ಲಿ ತಮ್ಮ ಫೋನ್ ನಂಬರ್ ಹಾಗೂ 5 ಟನ್ ಬೆಳ್ಳುಳ್ಳಿ ವ್ಯಾಪಾರಕ್ಕಾಗಿ ಬೇಕೆಂದು ಅಪ್ ಲೋಡ್ ಮಾಡಿದ್ದರು.

ವಂಚಕನೊಬ್ಬ ಖಾಲಿದ್ ಖಾನ್ ಮೊಬೈಲ್‌ಗೆ ಫೋನ್ ಮಾಡಿ ತನ್ನ ಹೆಸರು ಲೋಕೇಶ್, ಸತ್ಯಸಾಯಿ ಎಂಟರ್ ಪ್ರೈಸಸ್ ನ ಮ್ಯಾನೇಜರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಅಲ್ಲದೆ, ಆಂಧ್ರದ ಗುಂಟೂರಿನಲ್ಲಿ ತಮ್ಮ ಕಂಪನಿಯಿದ್ದು, ನಿಮಗೆ 2.5 ಟನ್ ಬೆಳ್ಳುಳ್ಳಿಯನ್ನು ಕಳುಹಿಸುವುದಾಗಿ ಹೇಳಿದ್ದಾನೆ.

ಮೊಮ್ಮಗಳ ಬೆತ್ತಲೆ ವಿಡಿಯೋ ತೋರಿಸಿ ಬೆದರಿಕೆ; ಮರ್ಯಾದೆಗೆ ಹೆದರಿ ವಿಷ ಸೇವಿಸಿದ ಕುಟುಂಬ

ಆಗ ಖಾಲಿದ್ ಸ್ಯಾಂಪಲ್‌ಗಾಗಿ ಬೆಳ್ಳುಳ್ಳಿಯ ಫೋಟೋ ವಾಟ್ಸ್ ಆಪ್ ಗೆ ತರಿಸಿಕೊಂಡು ನೋಡಿದ್ದಾರೆ. ಬೆಳ್ಳುಳ್ಳಿ ಕೊಳ್ಳಲು ಒಪ್ಪಿ 50 ಸಾವಿರ ರು. ವಂಚಕ ಹೇಳಿದಂತೆ ಗೂಗಲ್ ಪೇ ಮಾಡಿದ್ದಾರೆ. ನಂತರ ಇನ್ ವಾಯ್ಸ್ ಕಳುಹಿಸಿ ಮತ್ತೆ ಹಣ ಕೇಳಿದಾಗ 50 ಸಾವಿರ ವರ್ಗಾವಣೆ ಮಾಡಿದ್ದಾರೆ. 2.5 ಟನ್ ಬೆಳ್ಳುಳ್ಳಿ ಸೌತ್ ಎಂಡಿಯಮ್ ಟ್ರಾನ್ಸ್ ಪೋರ್ಟ್ ಗೆ ಲೋಡ್ ಮಾಡಿರುವುದಾಗಿ ಹೇಳಿ ಟ್ರಾನ್ಸ್ ಪೋರ್ಟ್ ಬಿಲ್ ಕಳುಹಿಸಿ ಮತ್ತೆ ಹಣ ಕೇಳಿದಾಗ ಖಾಲಿದ್ ರವರು 15 ಸಾವಿರ ಕಳುಹಿಸಿದ್ದಾರೆ.

ಆನಂತರ ಮತ್ತೊಬ್ಬ ವ್ಯಕ್ತಿ ತಾನು ಸೌತ್ ಇಂಡಿಯನ್ ಟ್ರಾನ್ಸ್ ಪೋರ್ಟ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ಪೂರ್ಣ ಹಣ ಕಳುಹಿಸಿದರೇ ಮಾತ್ರ ಬೆಳ್ಳುಳ್ಳಿ ಲೋಡ್ ಅನ್ನು ಕಳುಹಿಸುವುದಾಗಿ ಹೇಳಿದ್ದಾರೆ. ಆಗಲೂ ಖಾಲಿದ್ 1.10 ಲಕ್ಷ ರು.ಗಳನ್ನು ವರ್ಗಾವಣೆ ಮಾಡಿದ್ದಾರೆ. ಒಂದು ವಾರ ಕಳೆದರೂ ಬೆಳ್ಳುಳ್ಳಿ ಲೋಡ್ ಬರಲಿಲ್ಲ. ಆ ವ್ಯಕ್ತಿಗಳು ಫೋನ್ ಕರೆಯನ್ನು ಸ್ವೀಕರಿಸದೆ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಮೋಸ ಹೋದ ಮೇಲೆ ಖಾಲಿದ್ ಖಾನ್ ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!