
ರಾಮನಗರ(ಸೆ.29): ಫೋಟೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇನೆಂದು ಬೆದರಿಸಿ 2.75 ಲಕ್ಷ ಸುಲಿಗೆ ಮಾಡಿರುವ ಬಗ್ಗೆ ಕುಂಬಳಗೋಡು ಠಾಣೆಯಲ್ಲಿ ದೂರುದಾಖ ಲಾಗಿದೆ. ಕೆಂಗೇರಿ ರಾಮಸಂದ್ರದ ವಿನಾಯಕ ಬಡಾವಣೆಯ ನಿವಾಸಿಯೊಬ್ಬರ ಪುತ್ರಿಗೆ ಮೈಸೂರಿನ ಇಲವಾಲ ನಿವಾಸಿ ಯಶವಂತ್ ಬೆದರಿಸಿ ಹಣ ಸುಲಿದಿದ್ದಾನೆ. ಯುವತಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಾರೆ.
ಕಳೆದ ವರ್ಷ ಜೂನ್ನಲ್ಲಿ ಎಸ್.ಸಿ. ಮ್ಯಾಟ್ರಿಮೋನಿಯಲ್ಲಿ ವರನನ್ನು ಹುಡುಕಲು ಯುವತಿ ಪ್ರೊಫೈಲ್ ಹಾಕಿದ್ದರು. ಮ್ಯಾಟ್ರಿಮೊನಿಯಲ್ಲಿ ಸಿ.ಯಶವಂತ್ ಎಂಬಾತ ಪರಿಚಿತನಾಗಿ ದ್ದಾನೆ. ತಾನು ಬಿಬಿಎಂಪಿಯಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದಾನೆ. ಬಳಿಕ ಯುವತಿಗೆ ಕರೆ ಮಾಡಿ, ನಿಮ್ಮನ್ನು ನೋಡಲು ಪೋಷಕರನ್ನು ಕರೆ ತರುವೆ ಎಂದು ನಂಬಿಸಿದ್ದಾನೆ. ಬಳಿಕ 3 ತಿಂಗಳಾದರೂ ಆತ ಬಂದಿಲ್ಲ. ಹಾಗಾಗಿ ಯುವತಿ ಮನೆಯವರು ಆತನ ಸಂಬಂಧ ತಿರಸ್ಕರಿಸಿದ್ದಾರೆ.
ಬೆಂಗಳೂರು: ಮಾಜಿ ಪ್ರೇಮಿಯ ಮೊಬೈಲ್ ಸುಲಿಗೆಗೆ ಲೇಡಿ ಸುಪಾರಿ..!
ನಂತರ ಯುವತಿಗೆ ಮತ್ತೆ ಕರೆ ಮಾಡಿ ಪುಸಲಾಯಿಸಿ ನಂಬಿಸಿರುವ ಯಶವಂತ್, ವೇತನ ಬಂದಿಲ್ಲವೆಂದು ಸಬೂಬು ಹೇಳಿ ₹2.75 ಲಕ್ಷ ಖಾತೆಗೆ ಹಾಕಿಸಿಕೊಂಡಿದ್ದಾನೆ. ಹಣ ವಾಪಸ್ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಮ್ಯಾಟ್ರಿಮೋನಿಯಲ್ಲಿ ಫೇಕ್ ಐಡಿಯಲ್ಲಿ ಯಾರದ್ದೋ ಫೋಟೋ ಹಾಕಿ ಯಶವಂತ್ ಖಾತೆ ತೆರೆದಿರುವುದು ಯುವತಿ ಮನೆಯವರಿಗೆ ಗೊತ್ತಾಗಿದೆ. ಆನಂತರವೂ ಆತ ಪದೇ ಪದೇ ಫೋನ್ ಮಾಡಿ ಹಣ ಕಳುಹಿಸು, ಇಲ್ಲದಿದ್ದರೆ ನಿನ್ನ ಫೋಟೋ ತಿರುಚಿ ಹಾಕುತ್ತೇನೆಂದು ಬ್ಲ್ಯಾಕ್ಮೇಲ್ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ. ಯುವತಿಯ ತಂದೆ ಕುಂಬಳಗೋಡು ಠಾಣೆಯಲ್ಲಿ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ