ಕರ್ನಾಟಕದಲ್ಲಿ ಮತ್ತೆ ಸಂಭವಿಸಿದ ಬೋರ್​ವೆಲ್ ದುರಂತ: ಎರಡೂವರೆ ವರ್ಷದ ಮಗು ಸಾವು

Published : Sep 18, 2021, 08:49 PM ISTUpdated : Sep 18, 2021, 08:50 PM IST
ಕರ್ನಾಟಕದಲ್ಲಿ ಮತ್ತೆ ಸಂಭವಿಸಿದ ಬೋರ್​ವೆಲ್ ದುರಂತ: ಎರಡೂವರೆ ವರ್ಷದ ಮಗು ಸಾವು

ಸಾರಾಂಶ

* ಬೋರ್​ವೆಲ್​ಗೆ ಬಿದ್ದಿದ್ದ ಎರಡೂವರೆ ವರ್ಷದ ಮಗು ಸಾವು * ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ಘಟನೆ * ಮಗುವನ್ನು ಹೊರ ತೆಗೆದ ಅಗ್ನಿಶಾಮಕ ಸಿಬ್ಬಂದಿ 

ಬೆಳಗಾವಿ, (ಸೆ.18): ರಾಜ್ಯದಲ್ಲಿ ಮತ್ತೆ ಬೋರ್​ವೆಲ್​ ದುರಂತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ  ಬೋರ್​ವೆಲ್​ಗೆ ಬಿದ್ದಿದ್ದ ಎರಡೂವರೆ ವರ್ಷದ ಮಗು ಸಾವನ್ನಪ್ಪಿದೆ.

ಅಗ್ನಿಶಾಮಕ ಸಿಬ್ಬಂದಿ ಮಗುವಿನ ಮೃತದೇಹವನ್ನು ಹೊರ ತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಶರತ್ ಹಸಿರೆ ಎಂಬ ಎರಡೂವರೆ ವರ್ಷದ ಮಗುವೇ ಬೋರ್ವೆಲ್‌ಗೆ ಬಿದ್ದಿದ್ದ ಮಗು.

ಉಯಿಲಮುಡಿ ಕಡಲ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ

ಎರಡು ದಿನಗಳಿಂದ ಮಗು ನಾಪತ್ತೆಯಾಗಿತ್ತು. ಈ ಬಗ್ಗೆ ಮಗುವಿನ ತಂದೆ ಪೊಲಿಸ್ ಠಾಣೆಗೆ ಹೋಗಿ ಕಿಡ್ನಾಪ್ ದೂರು ನೀಡಿದ್ದರು. ಆದ್ರೆ, ಮಗು ಬೋರ್‌ವೆಲ್‌ಗೆ ಬಿದ್ದಿರುವುದು ಇಂದು (ಸೆ.18) ಗೊತ್ತಾಗಿದೆ.

ವಿಷಯ ತಿಳಿದು ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕಾಗಮಿಸಿ ಮಗು ರಕ್ಷಣೆಗೆ ಕಾರ್ಯಚರಣೆಗಿಳಿದೆ. ಆದ್ರೆ, ದುರದೃಷ್ಟವಶಾತ್ ಮಗು ಬದುಕಿ ಬರಲಿಲ್ಲ. ಸದ್ಯ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?