ನಾಣ್ಯ ಹಾಕಬೇಕೆಂದು ಹೆತ್ತವರ ಕಣ್ಣೆದುರಲ್ಲೇ ನದಿಗೆ ಜಿಗಿದು ಯುವತಿ ಆತ್ಮಹತ್ಯೆ!

Published : Oct 25, 2020, 10:39 PM IST
ನಾಣ್ಯ ಹಾಕಬೇಕೆಂದು ಹೆತ್ತವರ ಕಣ್ಣೆದುರಲ್ಲೇ ನದಿಗೆ ಜಿಗಿದು ಯುವತಿ ಆತ್ಮಹತ್ಯೆ!

ಸಾರಾಂಶ

ಯುವತಿಯೊಬ್ಬಳು ನದಿಗೆ ನಾಣ್ಯ ಹಾಕಬೇಕೆಂದು ಹೇಳಿ ವಾಹನ ಇಳಿದು ಸೇತುವೆಯ ಅಂಚಿಗೆ ಹೋಗಿ, ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿಜಯಪುರ, (ಅ.25): ಯುವತಿಯೊಬ್ಬಳು ಹೆತ್ತವರ ಕಣ್ಣೆದ್ದುರಲ್ಲೇ ಭೀಮಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಇಂದು (ಭಾನುವಾರ) ಘಟನೆ ವಿಜಯಪುರದಲ್ಲಿ ನಡೆದಿದೆ.

ಐಶ್ವರ್ಯ ಶ್ರೀಪಾಲ ಕಬ್ಬಿನ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಧಾರವಾಡದ ನವಲಗುಂದ ಪಟ್ಟಣದ ನಿವಾಸಿ. ಕುಟುಂಬಸ್ಥರೊಂದಿಗೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದ ಕಾಲೇಜು ಕನ್ಯೆ ನಿಗೂಢ ಸಾವು: ಅನುಮಾನ ಹುಟ್ಟುಹಾಕಿದೆ ಪಾರ್ಟ್ನರ್ ನಡೆ

ಮಾರ್ಗ ಮಧ್ಯೆ ವಿಜಯಪುರದ ಆಲಮೇಲ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ನಡುವೆ ಭೀಮಾನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆ ಬಳಿ ವಾಹನ ನಿಲ್ಲಿಸುವಂತೆ ಐಶ್ವರ್ಯಾ ಕೇಳಿದ್ದಾಳೆ. ಬಳಿಕ ನದಿಗೆ ನಾಣ್ಯ ಹಾಕಬೇಕೆಂದು ಹೇಳಿ ವಾಹನ ಇಳಿದು ಸೇತುವೆಯ ಅಂಚಿಗೆ ಹೋಗಿ, ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಐಶ್ವರ್ಯ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗಲೆಂದೇ ವಿಜಯಪುರದ ಇಂಡಿ ಪಟ್ಟಣದಲ್ಲಿದ್ದ ಅಕ್ಕನ ಮನೆಗೆ ತಾಯಿಯ ಜತೆ ಬಂದಿದ್ದಳು. ಎಲ್ಲರೂ ಒಟ್ಟುಗೂಡಿ ದೇವಸ್ಥಾನಕ್ಕೆ ಹೋಗುವಾಗ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದೆ. ಐಶ್ವರ್ಯಾಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!