
ಚೆನ್ನೈ(ಮೇ 22) ಚೆನ್ನೈ ಎಂಜಿಆರ್ ರೈಲ್ವೆ ನಿಲ್ದಾಣದಲ್ಲಿ (2014) ನಡೆದಿದ್ದ ಬಾಂಬ್ ಬ್ಲಾಸ್ಟ್ ಗೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಸ್ಫೋಟದಲ್ಲಿ ಮಹಿಳಾ ಇಂಜಿನಿಯರ್ ಹತರಾಗಿದ್ದರು
38 ರಫೀಕ್ ಎಂಬಾತನನ್ನು ಪೊಲೀಸ್ ತಂಡ ವಶಕ್ಕೆ ಪಡೆದಿದೆ. ನಿಷೇಧಿತ ಸಂಘಟನೆ ಅಲ್ ಉಮಾ ಪರವಾಗಿ ಈ ರಫೀಕ್ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ದರೋಡೆ ಪ್ರಕರಣವೊಂದರ ಮಾಹಿತಿ ಕಲೆಹಾಕಿದಾಗ ಬಾಂಬ್ ಬ್ಲಾಸ್ಟ್ ವಿಚಾರವೂ ಬಹಿರಂಗವಾಗಿದೆ. ಎನ್ ಐಎ ಕೂಡ ಈ ಆರೋಪಿಯ ಹುಡುಕಾಟ ನಡೆಸುತ್ತಿತ್ತು.
ದೆಹಲಿ ಸ್ಫೋಟದ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ
ಚೆನ್ನೈ ಪೊಲೀಸರು ಎನ್ಐಎಗೆ ಮಾಹಿತಿ ನೀಡಿದ್ದು ಆರೋಪಿಯನ್ನು ವಶಕ್ಕೆ ನೀಡಲಿದ್ದಾರೆ. ಮೊದಲು ನಕಲಿ ನೋಟು ಚಲಾವಣೆ ಮಾಡುತ್ತಿದ್ದ ರಫೀಕ್ ನಂತರ ಒಂದಾದ ಮೇಲೆ ಒಂದು ಅಪರಾಧ ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಾಲ್ಡಾ ಜಿಲ್ಲೆಯ ಅನೇಕ ದೇಶದ್ರೋಹಿಗಳೊಂದಿಗೆ ಸಂಪರ್ಕ ಹೊಂದಿದ್ದ ಎಂದಿದ್ದಾರೆ.
ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದ ರಫೀಕ್ ಅಲ್ಲಿಂದ ನಕಲಿ ನೋಟುಗಳನ್ನು ತಂದು ಇಲ್ಲಿ ಚಲಾವಣೆ ಮಾಡುತ್ತಿದ್ದ. ಇತ್ತೀಚೆಗೆ ರಫೀಕ್ ತನ್ನ ಸಹಚರನೊಂದಿಗೆ ಸೇರಿ ಚಿನ್ನದ ವ್ಯಾಪಾರಿಯೊಬ್ಬರನ್ನು ದರೋಡೆ ಮಾಡಿದ್ದ.
ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾಗ ಪೊಲೀಸರಿಗೆ ಹಲವು ಅನುಮಾನಗಳು ಕಾಡಿವೆ. ಜತೆಗೆ ಸಿಸಿಟಿವಿ ದೃಶ್ಯಾವಳಿಗಳ ಮಾಹಿತಿಯನ್ನು ಕಲೆಹಾಕಿದ್ದು ಬಾಂಬ್ ಬ್ಲಾಸ್ಟ್ ಜತೆ ನಂಟು ಇರುವುದು ಗೊತ್ತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ