ಭಾರತೀಯ ಅಂಚೆ ಮೂಲಕ ತರಿಸಿಕೊಂಡಿದ್ದ ₹21 ಕೋಟಿ ಡ್ರಗ್ಸ್‌ ಜಪ್ತಿ!

Published : Oct 19, 2024, 07:29 AM IST
ಭಾರತೀಯ ಅಂಚೆ ಮೂಲಕ ತರಿಸಿಕೊಂಡಿದ್ದ ₹21 ಕೋಟಿ ಡ್ರಗ್ಸ್‌ ಜಪ್ತಿ!

ಸಾರಾಂಶ

ದುಷ್ಕರ್ಮಿಗಳು ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. 

ಬೆಂಗಳೂರು (ಅ.19): ದುಷ್ಕರ್ಮಿಗಳು ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. 

28 ಕೆ.ಜಿ. ಹೈಡ್ರೋ ಗಾಂಜಾ, 2,569 ಎಲ್‌ಎಸ್‌ಡಿ, 1 ಕೆ.ಜಿ. 618 ಗ್ರಾಂ ಎಂಡಿಎಂಎ ಕ್ರಿಸ್ಟೆಲ್‌, 11,908 ಎಕ್ಸ್‌ಟೆಸಿ ಮಾತ್ರೆಗಳು, 770 ಗ್ರಾಂ ಹೆರಾಯಿನ್‌, 102 ಗ್ರಾಂ ಕೊಕೇನ್‌, 6 ಕೆ.ಜಿ.280 ಗ್ರಾಂ ಆಮ್‌ಫಿಟಮೈನ್‌, 336 ಗ್ರಾಂ ಚರಸ್‌, 1 ಕೆ.ಜಿ. 217 ಗ್ರಾಂ ಗಾಂಜಾ ಎಣ್ಣೆ, 445 ಗ್ರಾಂ ಮೆಥಾಕ್ಸಿನ್‌, 11 ಇ-ಸಿಗರೇಟ್‌, 102 ಎಂಎಲ್‌ ನಿಕೋಟಿನ್‌, 400 ಗ್ರಾಂ ಟೊಬ್ಯಾಕೋ ಸೇರಿದಂತೆ ಇತರೆ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

606 ಪಾರ್ಸೆಲ್‌ಗಳಲ್ಲಿ ಮಾದಕ ವಸ್ತುಗಳು: ಚಾಮರಾಜಪೇಟೆ ಫಾರಿನ್‌ ಫೋಸ್ಟ್‌ ಆಫೀಸ್‌ಗೆ ಯು.ಎಸ್‌., ಯು.ಕೆ., ಬೆಲ್ಜಿಯಂ, ಥೈಲ್ಯಾಂಡ್‌, ನೆದರ್‌ ಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ 3,500 ಅನುಮಾನಾಸ್ಪದ ಪಾರ್ಸೆಲ್‌ಗಳು ಬಂದಿದ್ದವು. ಈ ಸಂಬಂಧ ಫೋಸ್ಟ್‌ ಆಫೀಸ್‌ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಶ್ವಾನದಳದೊಂದಿಗೆ ಈ ಪಾರ್ಸೆಲ್‌ಗಳನ್ನು ಪರಿಶೀಲಿಸಿದ್ದಾರೆ. ಈ ಪೈಕಿ 606 ಅನುಮಾನಾಸ್ಪದ ಪಾರ್ಸೆಲ್‌ಗಳಲ್ಲಿ ಮಾದಕ ವಸ್ತುಗಳು ಇರುವುದು ಕಂಡು ಬಂದಿತ್ತು. ಈ ಸಂಬಂಧ ನ್ಯಾಯಾಲಯದಿಂದ ಅನುಮತಿ ಪಡೆದು ₹21.17 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ವಾಲ್ಮೀಕಿ ಕೇಸ್‌ನಲ್ಲಿ ನಾಗೇಂದ್ರಗೆ ದೊಡ್ಡ ಶಿಕ್ಷೆಯಾಗಲಿದೆ: ಜನಾರ್ದನ ರೆಡ್ಡಿ

ಆರೋಪಿಗಳ ಪತ್ತೆಗೆ ತನಿಖೆ: ಆರೋಪಿಗಳು ಭಾರತೀಯ ಅಂಚೆ ಮೂಲಕ ಯು.ಎಸ್, ಯು.ಕೆ. ಬೆಲ್ಜಿಯಂ ಸೇರಿದಂತೆ ವಿವಿಧ ದೇಶಗಳಿಂದ ನಿಷೇಧಿತ ಮಾದಕವಸ್ತುಗಳನ್ನು ನಗರಕ್ಕೆ ತರಿಸಿಕೊಂಡು ಬಳಿಕ ಹೆಚ್ಚಿನ ಬೆಲೆಗೆ ಪರಿಚಿತ ವ್ಯಕ್ತಿಗಳಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿರುವ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿದೇಶಗಳಿಂದ ಈ ಪಾರ್ಸೆಲ್‌ ತರಿಸಿಕೊಂಡಿರುವ ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ