
ಬೆಂಗಳೂರು(ಮಾ.09): ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ತನ್ನ ಮಾಜಿ ಪ್ರಿಯತಮೆ ಮನೆ ಮುಂದೆ ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ್ದ ಆಟೋ ಚಾಲಕನೊಬ್ಬ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾನೆ. ಮಾಗಡಿ ರಸ್ತೆಯ ತುಂಗಾ ನಗರದ ಚೇತನ್ (21) ಮೃತ ದುರ್ದೈವಿ.
ನಂದಿನಿ ಲೇಔಟ್ ಸಮೀಪ ತನ್ನ ಪ್ರಿಯತಮೆ ಮನೆಗೆ ಬಳಿ ಗುರುವಾರ ರಾತ್ರಿ ಚೇತನ್ ಆತ್ಮಹತ್ಯೆ ಯತ್ನಿಸಿದ್ದ. ಬಳಿಕ ನಾಗರಬಾವಿ ಸಮೀಪ ಖಾಸಗಿ ಆಸ್ಪತ್ರೆಗೆ ಆತನನ್ನು ಮೃತನ ಕುಟುಂಬದವರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಚೇತನ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಕಲಬುರಗಿ: ಹಾಸ್ಟೇಲ್ನಲ್ಲೇ ನೇಣಿಗೆ ಶರಣಾದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ
ಮೂರ್ನಾಲ್ಕು ವರ್ಷಗಳಿಂದ ನಂದಿನಿ ಲೇಔಟ್ ನಲ್ಲಿ ನೆಲೆಸಿರುವ ಯುವತಿಯನ್ನು ಚೇತನ್ ಪ್ರೀತಿಸುತ್ತಿದ್ದ. ಆದರೆ ಇತ್ತೀಚಿಗೆ ಪ್ರಿಯಕರನಿಂದ ದೂರವಾಗಲು ಆಕೆ ಯತ್ನಿಸಿದ್ದಳು. ಇದರಿಂದ ಬೇಸರಗೊಂಡಿದ್ದ ಚೇತನ್, ಪ್ರಿಯತಮೆ ಮನೆಗೆ ಗುರುವಾರ ರಾತ್ರಿ ತನ್ನ ಪೋಷಕರನ್ನು ಕರೆದುಕೊಂಡು ಹೋಗಿ ಮದುವೆ ಪ್ರಸ್ತಾಪ ಮಾಡಿದ್ದಾನೆ. ಆಗ ಆಕೆಯ ಪೋಷಕರು ವಿರೋಧಿಸಿದ್ದಾರೆ. ಕೊನೆಗೆ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಬೇಸರಗೊಂಡ ಚೇತನ್, ತನ್ನ ಹೊಟ್ಟೆಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ. ಆ ವೇಳೆ ಆತನನ್ನು ರಕ್ಷಿಸಿ ಮನೆಗೆ ಚೇತನ್ ಪೋಷಕರು ಕರೆದುಕೊಂಡು ಹೋಗಿದ್ದಾರೆ. ಮನೆಗೆ ಮರಳಿದ ಕೆಲ ಹೊತ್ತಿನಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡು ಆತ ಒದ್ದಾಡಿದ್ದಾನೆ.
ತಕ್ಷಣವೇ ನಾಗರಬಾವಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚೇತನ್ನನ್ನು ಆತನ ಪೋಷಕರು ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ