ನೇಣಿಗೆ ಶರಣಾದ ನಟಿ, ಎರಡು ದಿನ ಬಳಿಕ ಘಟನೆ ಬೆಳಕಿಗೆ

Published : Mar 02, 2020, 08:08 PM IST
ನೇಣಿಗೆ ಶರಣಾದ ನಟಿ, ಎರಡು ದಿನ ಬಳಿಕ ಘಟನೆ ಬೆಳಕಿಗೆ

ಸಾರಾಂಶ

ನಟಿಯೊಬ್ಬಳ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಬಳಿಕ ನಟಿ ಆತ್ಮಹತ್ಯೆ ಸುದ್ದಿ ಬೆಳಕಿಗೆ ಬಂದಿದೆ. ಯಾರು ಆ ನಟಿ..? ಘಟನೆ ನಡೆದಿದ್ದೇಲ್ಲಿ? ಈ ಕೆಳಗಿನಂತಿದೆ ವಿವರ

ಚೆನ್ನೈ, (ಮಾ.02): ತಮಿಳು ನಟಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನ ತಿರುವೊಟ್ಟಿಯೂರ್ ಎಂಬಲ್ಲಿ ನಡೆದಿದೆ.

ಪಿ.ಪದ್ಮಜಾ (23) ಆತ್ಮಹತ್ಯೆ ಮಾಡಿಕೊಂಡ ನಟಿ. ಈಕೆ ಅನೇಕ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾಳೆ. ಆದರೆ ಭಾನುವಾರ ತಿರುವೊಟ್ಟಿಯೂರ್ ನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ವಿಶ್ವಾಸ ಕಳೆದುಕೊಂಡಿತಾ ಜೆಡಿಎಸ್, ಸದ್ದು ಮಾಡುತ್ತಿದೆ ದೀಪಿಕಾ ಡ್ರೆಸ್; ಮಾ.2ರ ಟಾಪ್ 10 ಸುದ್ದಿ!

2 ದಿನಗಳಿಂದ ಮನೆ ಲಾಕ್ ಆಗಿರುವುದನ್ನು ನೋಡಿದ ಮನೆಯ ಮಾಲೀಕ ಎಸ್.ಕಾಶಿನಾಥನ್, ಅನುಮಾನಗೊಂಡು ತಿರುವೊಟ್ಟಿಯೂರ್ ಪೊಲೀಸರಿಗೆ ಫೋನ್ ಮಾಡಿ ತಿಳಿಸಿದ್ದಾರೆ. 

ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಬಾಗಿಲು ಮುರಿದು ನೋಡಿದಾಗ ಪದ್ಮಜಾ ನೇಣು ಬಿಗಿದ ಸ್ಥಿತಿಯಲ್ಲಿರುವುದು ಬೆಳಕಿಗೆಬಂದಿದೆ. ಪದ್ಮಜಾ ಕಲಾದಿಪೇಟೆಯ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಳು. 

ಪವನ್ (25) ಎಂಬವರ ಜೊತೆ ಮದುವೆಯಾಗಿದ್ದು, 2. ವರ್ಷದ ಮಗನಿದ್ದಾನೆ. ಆದರೆ ಪತಿಯ ಜೊತೆ ಜಗಳ ಮಾಡಿಕೊಂಡು ಪ್ರತ್ಯೇಕವಾಗಿ ವಾಸಿಸುತ್ತಿದ್ದಳು.  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪದ್ಮಜಾ ಕಳೆದ ತಿಂಗಳು ಪತಿಯಿಂದ ದೂರವಾಗಿದ್ದಳು.

ಪತಿ ಪವನ್ ಆಂಧ್ರ ಪ್ರದೇಶಕ್ಕೆ ಶಿಫ್ಟ್ ಆಗಿದ್ದರು. ಸಾಲದ ಕಾರಣದಿಂದಾಗಿ ಪದ್ಮಜಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಅಂದರೆ ಶನಿವಾರ ತನ್ನ ಸಹೋದರಿಗೆ ವಿಡಿಯೋ ಕಾಲ್ ಮಾಡಿದ್ದಳು. ಈ ವೇಳೆ ಪದ್ಮಜಾ ಆರ್ಥಿಕ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದಳು.

ಅಲ್ಲದೇ ಸಿನಿಮಾ ಮತ್ತು ಸೀರಿಯಲ್‍ನಲ್ಲಿ ಮುಖ್ಯವಾದ ಪಾತ್ರಗಳು ಸಿಗುತ್ತಿಲ್ಲ ಎಂದು ತನ್ನ ಅಳಲು ತೋಡಿಕೊಂಡಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!