
ಮೈಸೂರು(ಜೂ.16): ಮೂವರು ದುಷ್ಕರ್ಮಿಗಳ ತಂಡವೊಂದು ಯುವಕನನೊಬ್ಬನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಇಂದು(ಶುಕ್ರವಾರ) ನಡೆದಿದೆ. ಹೇಮಂತ್ ಅಲಿಯಾಸ್ ಸ್ವಾಮಿ(23) ಕೊಲೆಯಾದ ದುರ್ದೈವಿಯಾಗಿದ್ದಾನೆ.
ಬೈಕ್ನಲ್ಲಿ ಬರುತ್ತಿದ್ದ ವೇಳೆ ಸ್ವಾಮಿಯನ್ನ ತಡೆದು ಕಲ್ಲಿನಿಂದ ಜಜ್ಜಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಸಾಗರ್, ಪ್ರತಾಪ್, ಮಂಜು ಎಂಬುವರು ಸ್ವಾಮಿಯನ್ನ ಕೊಲೆ ಮಾಡಿದ್ದಾರೆ ಅಂತ ಆರೋಪಿಸಲಾಗಿದೆ.
ಕಲಬುರಗಿ: ಅಕ್ರಮ ಮರಳು ಸಾಗಾಟಕ್ಕೆ ಕಾನ್ಸ್ಟೇಬಲ್ ಬಲಿ, ಕೊಲೆಯೋ, ಆಕಸ್ಮಿಕವೋ?
ಸಾಗರ್ ಸಹೋದರಿಯನ್ನು ಸ್ವಾಮಿ ಪ್ರೀತಿಸುತ್ತಿದ್ದನಂತೆ. ಇದೇ ವಿಚಾರವಾಗಿ ಸಾಗರ್ ಹಾಗೂ ಸ್ವಾಮಿ ನಡುವೆ ವೈಷಮ್ಯ ಇತ್ತು. ಇದೇ ವಿಚಾರಕ್ಕೆ ಸ್ನೇಹಿತರ ಜೊತೆ ಸೇರಿ ಸ್ವಾಮಿಯನ್ನ ಕೊಲೆ ಮಾಡಲಾಗಿದೆ ಅಂತ ಆರೋಪಿಸಲಾಗಿದೆ.
ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಜಯನಗರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ