ತುಂಬಿ ಹರಿಯುತ್ತಿರೋ ಕಾವೇರಿ ನದಿಗೆ ಹಾರಿ ಆತ್ಮಹತ್ಯಗೆ ಯತ್ನ: ಮಗು ನಾಪತ್ತೆ, ತಾಯಿ ಬಚಾವ್..!

Published : Aug 08, 2020, 05:26 PM IST
ತುಂಬಿ ಹರಿಯುತ್ತಿರೋ ಕಾವೇರಿ ನದಿಗೆ ಹಾರಿ ಆತ್ಮಹತ್ಯಗೆ ಯತ್ನ: ಮಗು ನಾಪತ್ತೆ, ತಾಯಿ ಬಚಾವ್..!

ಸಾರಾಂಶ

ಭಾರೀ ಮಳೆಯಿಂದಾಗಿ ಮೊದಲೇ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಇದರ ಮಧ್ಯೆ ಮಹಿಳೆಯೊಬ್ಬರು ತುಂಬಿ ಹರಿಯುತ್ತಿರೋ ಕಾವೇರಿ ನದಿಗೆ ಹಾರಿ ಆತ್ಮಹತ್ಯಗೆ  ಯತ್ನಿಸಿದ್ದಾಳೆ.

ಮಂಡ್ಯ, (ಆ.08):  ತುಂಬಿ ಹರಿಯುತ್ತಿರೋ ಕಾವೇರಿ ನದಿಗೆ ಹಾರಿ ತಾಯಿ, ಮಗ ಆತ್ಮಹತ್ಯಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ನಡೆದಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರದ ಮಹಿಳೆ ಅಪೂರ್ವ(24 ) ತನ್ನ  ಎರಡೂವರೆ ವರ್ಷದ ಪುತ್ರಿ ಕೀರ್ತನಾ ಜತೆಗೆ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ನದಿಗೆ ಹಾರಿದ್ದಾಳೆ.

ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ: KRS ಡ್ಯಾಂ ಬಹುತೇಕ ಭರ್ತಿ, ಸಂತಸದಲ್ಲಿ ರೈತರು..!

ಇದನ್ನು ನೋಡಿದ ಸ್ಥಳೀಯರು ನೀರಿನಲ್ಲಿ ಕೊಚ್ಚಿ  ಹೋಗ್ತಿದ್ದ ಅಪೂರ್ವಳನ್ನ ರಕ್ಷಣೆ ಮಾಡಿದ್ದಾರೆ.  ಸುಮಾರು 2  ಕಿ.ಮೀ ದೂರ  ನದಿಯಲ್ಲಿ ಕೊಚ್ಚಿ ಹೋಗಿದ್ದ ಅಪೂರ್ವಳನ್ನ  ಗಂಜಾಮ್ ಕರಿಘಟ್ಟ ಸೇತುವೆ ಬಳಿ ಹಗ್ಗ ಹಾಕಿ ರಕ್ಷಣೆ ಮಾಡಿದ್ದಾರೆ.

ಆದ್ರೆ, ಮಗು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಕೊಚ್ಚಿ ಹೋದ ಮಗುವಿನ ಶವಕ್ಕಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ