ಬೆಂಗಳೂರಲ್ಲಿ 25 ಅಕ್ರಮ ಬಾಂಗ್ಲಾದೇಶಿಗಳು ವಶಕ್ಕೆ

By Kannadaprabha NewsFirst Published May 31, 2024, 8:31 AM IST
Highlights

ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು, ಹೆಬ್ಬಗೋಡಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡು ಅಕ್ರಮವಾಗಿ ನೆಲೆಸಿದ್ದ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಬಾಂಗ್ಲಾ ಪ್ರಜೆಗಳು ತಂಗಿದ್ದ ಶೆಡ್‌ಗಳಲ್ಲಿ ಅವರ ಹಿನ್ನೆಲೆ ತಿಳಿಸುವ ಪ್ರಮುಖ ದಾಖಲೆಗಳು ಮತ್ತು ಮೊಬೈಲ್‌ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು(ಮೇ.31): ನಗರದ ವಿವಿಧೆಡೆ ದಾಳಿ ಮಾಡಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಅಕ್ರಮವಾಗಿ ನೆಲೆಸಿದ್ದ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.

ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು, ಹೆಬ್ಬಗೋಡಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡು ಅಕ್ರಮವಾಗಿ ನೆಲೆಸಿದ್ದ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಬಾಂಗ್ಲಾ ಪ್ರಜೆಗಳು ತಂಗಿದ್ದ ಶೆಡ್‌ಗಳಲ್ಲಿ ಅವರ ಹಿನ್ನೆಲೆ ತಿಳಿಸುವ ಪ್ರಮುಖ ದಾಖಲೆಗಳು ಮತ್ತು ಮೊಬೈಲ್‌ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.

Latest Videos

ಅಕ್ರಮ ಬಾಂಗ್ಲಾದೇಶಿ ವಲಸೆ: ಕೇರಳದಲ್ಲಿ ಎನ್‌ಐಎ ಬಲೆಗೆ ಬೆಂಗಳೂರು ಕಿಂಗ್‌ಪಿನ್‌

ನಗರದಲ್ಲಿ ಕಳೆದ 20 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ನೂರುಲ್ಲಾ ಈ ನುಸುಳುಕೋರರ ಕಿಂಗ್‌ಪಿನ್‌ ಎನ್ನಲಾಗಿದೆ. ಈತನ ಮುಖಾಂತರ ಭಾರತಕ್ಕೆ ಬಂದು ಇವರೆಲ್ಲ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದರು. ಈ ಪೈಕಿ ಇಬ್ಬರು ನಗರದಲ್ಲಿ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ವಿಚಾರ ವಿಚಾರಣೆಯಿಂದ ಗೊತ್ತಾಗಿದೆ.

ಐವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ಕಾರ್ಯ ಮುಂದುವರೆದಿದೆ. ಸಿಸಿಬಿ ದಾಳಿ ವೇಳೆ ಸಿಕ್ಕಿಬಿದ್ದಿರುವ ಈ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ವಿದೇಶಿ ನಗರ ಪ್ರಾದೇಶಿಕ ನೋಂದಣಿ ಕಚೇರಿ(ಎಫ್‌ಆರ್‌ಆರ್‌ಒ)ಗೆ ಹಾಜರುಪಡಿಸಲಾಗುತ್ತದೆ. ಈ ಸಂಬಂಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

click me!