ಬೆಳಗಾವಿ: ಪಾರ್ಟಿ ಮಾಡಲು ಹಣ ಕೊಡದ್ದಕ್ಕೆ ಯುವಕ ಆತ್ಮಹತ್ಯೆ..!

Published : Jan 02, 2024, 08:41 PM IST
ಬೆಳಗಾವಿ: ಪಾರ್ಟಿ ಮಾಡಲು ಹಣ ಕೊಡದ್ದಕ್ಕೆ ಯುವಕ ಆತ್ಮಹತ್ಯೆ..!

ಸಾರಾಂಶ

ಕಣಬರ್ಗಿಯ ಗೋಕಾಕ ರಸ್ತೆಯ ನಿವಾಸಿ ಸಿದ್ದರಾಯ ಅಡಿವೆಪ್ಪ ಶಿಗೀಹಳ್ಳಿ  ಆತ್ಮಹತ್ಯೆಗೆ ಶರಣಾದ ಯುವಕ. ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಲು, ಭಾನುವಾರ ರಾತ್ರಿ ಪಾರ್ಟಿ ಮಾಡಲೆಂದು ಮನೆಯಲ್ಲಿ ₹10000 ಹಣ ಕೇಳಿದ್ದಾನೆ. ರೈತ ಕುಟುಂಬವಾಗಿದ್ದರಿಂದ ಅಷ್ಟೊಂದು ಹಣ ಕೊಡಲು ಆಗುವುದಿಲ್ಲ ಎಂದು ಮನೆಯವರು ಆತನಿಗೆ ತಿಳಿಸಿದ್ದಾರೆ. ಇಷ್ಟಕ್ಕೇ ಮನನೊಂದ ಆತ ನೇಣಿಗೆ ಶರಣಾಗಿದ್ದಾನೆ.

ಬೆಳಗಾವಿ(ಜ.02):  ಹೊಸ ವರ್ಷದ ಹಿನ್ನೆಲೆಯಲ್ಲಿ ಪಾರ್ಟಿ ಮಾಡಲು ಮನೆಯಲ್ಲಿ ಹಣ ನೀಡಲು ನಿರಾಕರಿಸಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಕಣಬರ್ಗಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. 

ಕಣಬರ್ಗಿಯ ಗೋಕಾಕ ರಸ್ತೆಯ ನಿವಾಸಿ ಸಿದ್ದರಾಯ ಅಡಿವೆಪ್ಪ ಶಿಗೀಹಳ್ಳಿ (25) ಆತ್ಮಹತ್ಯೆಗೆ ಶರಣಾದ ಯುವಕ. ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಲು, ಭಾನುವಾರ ರಾತ್ರಿ ಪಾರ್ಟಿ ಮಾಡಲೆಂದು ಮನೆಯಲ್ಲಿ ₹10000 ಹಣ ಕೇಳಿದ್ದಾನೆ. ರೈತ ಕುಟುಂಬವಾಗಿದ್ದರಿಂದ ಅಷ್ಟೊಂದು ಹಣ ಕೊಡಲು ಆಗುವುದಿಲ್ಲ ಎಂದು ಮನೆಯವರು ಆತನಿಗೆ ತಿಳಿಸಿದ್ದಾರೆ. ಇಷ್ಟಕ್ಕೇ ಮನನೊಂದ ಆತ ನೇಣಿಗೆ ಶರಣಾಗಿದ್ದಾನೆ.

ಹಾಸನ: ಹೃದಯ ವಿದ್ರಾವಕ ಘಟನೆ; ಮಕ್ಕಳಿಗೆ ವಿಷವುಣಿಸಿ ತಾಯಿನೂ ಆತ್ಮಹತ್ಯೆ!

ಜಮೀನಿಗೆ ಹೋಗಿ ಬರುವುದಾಗಿ ಹೇಳಿ ತರಾತುರಿಯಲ್ಲಿ ತೆರಳಿದ್ದಾನೆ. ಈತನ ವ್ಯತಿರಿಕ್ತ ನಡೆಯಿಂದ ಅನುಮಾನಗೊಂಡ ಕುಟುಂಬಸ್ಥರೂ ಹೊಲಕ್ಕೆ ತೆರಳಿದ್ದಾರೆ. ಅಷ್ಟರಲ್ಲಾಗಲೇ ಹೊಲದಲ್ಲೇ ಇದ್ದ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದ ಎನ್ನಲಾಗಿದೆ. ಈ ಕುರಿತು ಮಾಳಮಾರುತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!