ಬೆಂಗಳೂರು: ಮದ್ಯದ ನಶೆಯಲ್ಲಿ 33 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

Published : Dec 30, 2023, 12:10 PM IST
ಬೆಂಗಳೂರು: ಮದ್ಯದ ನಶೆಯಲ್ಲಿ 33 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ಸಾರಾಂಶ

ಸ್ನೇಹಿತರ ಜೊತೆ ಪಾರ್ಟಿ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ನಿನ್ನೆ ಬೆಳಗ್ಗೆ 6.45 ರ ಸುಮಾರಿಗೆ ಘಟನೆ ನಡೆದಿದೆ. ದಿಪಾಂಶು ಶರ್ಮಾ ಸೇರಿ ಇಬ್ಬರು ಯುವತಿಯರು ಹಾಗೂ ಓರ್ವ ಸ್ನೇಹಿತ ಪಾರ್ಟಿ ಮಾಡುತ್ತಿದ್ದರು. ಮದ್ಯಪಾನದ ಜೊತೆ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 

ಬೆಂಗಳೂರು(ಡಿ.30):  ಮದ್ಯದ ನಶೆಯಲ್ಲಿ ಬಾಲ್ಕನಿಯಿಂದ ಬಿದ್ದು ಟೆಕ್ಕಿಯೋರ್ವ ಸಾವನ್ನಪ್ಪಿದ ಘಟನೆ ಕೆ.ಆರ್. ಪುರಂ ಅಯ್ಯಪ್ಪನಗರದ ಕೊಡಿಗೇಹಳ್ಳಿಯಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ದಿಪಾಂಶು ಶರ್ಮಾ(27) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. 

ಸ್ನೇಹಿತರ ಜೊತೆ ಪಾರ್ಟಿ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ನಿನ್ನೆ ಬೆಳಗ್ಗೆ 6.45 ರ ಸುಮಾರಿಗೆ ಘಟನೆ ನಡೆದಿದೆ. ದಿಪಾಂಶು ಶರ್ಮಾ ಸೇರಿ ಇಬ್ಬರು ಯುವತಿಯರು ಹಾಗೂ ಓರ್ವ ಸ್ನೇಹಿತ ಪಾರ್ಟಿ ಮಾಡುತ್ತಿದ್ದರು. ಮದ್ಯಪಾನದ ಜೊತೆ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 

ಬೆಂಗಳೂರು: ತನ್ನ ತಪ್ಪಿಲ್ಲದಿದ್ದರೂ ಕಾಲೇಜಿಂದ ಸಸ್ಪೆಂಡ್, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಅಪಾರ್ಟ್‌ಮೆಂಟ್‌ನ 33 ನೇ ಮಹಡಿಯ ಬಾಲ್ಕನಿಯಿಂದ ದಿಪಾಂಶು ಶರ್ಮಾ ಬಿದ್ದು ಮೃತಪಟ್ಟಿದ್ದಾನೆ. ಮೃತ ದಿಪಾಂಶು ಶರ್ಮಾ ಉತ್ತರ ಪ್ರದೇಶ ಮೂಲದವನಾಗಿದ್ದಾನೆ ಅಂತ ತಿಳಿದು ಬಂದಿದೆ. ಈತ ಆರ್ಮಿ ಸಿಬ್ಬಂದಿಯೊಬ್ಬರ ಮಗನಾಗಿದ್ದು ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದನು. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ