ಚಿಕ್ಕಬಳ್ಳಾಪುರ: ಹೊಸ ವರ್ಷದ ಪಾರ್ಟಿ, ಕಂಠ ಪೂರ್ತಿ ಮದ್ಯ ಕುಡಿಸಿ ಗೆಳೆಯನನ್ನೇ ಕೊಂದ ಸ್ನೇಹಿತರು..!

Published : Jan 01, 2023, 11:25 AM IST
ಚಿಕ್ಕಬಳ್ಳಾಪುರ: ಹೊಸ ವರ್ಷದ ಪಾರ್ಟಿ, ಕಂಠ ಪೂರ್ತಿ ಮದ್ಯ ಕುಡಿಸಿ ಗೆಳೆಯನನ್ನೇ ಕೊಂದ ಸ್ನೇಹಿತರು..!

ಸಾರಾಂಶ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮದನಪಲ್ಲಿ ರಸ್ತೆಯ ಐಮರೆಡ್ಡಿಹಳ್ಳಿಯ ಬಾಲಾಜಿ ಡಾಬಾ ಬಳಿ ನಡೆದ ಘಟನೆ 

ಚಿಕ್ಕಬಳ್ಳಾಪುರ(ಜ.01):  ಹೊಸ ವರ್ಷದ ಸೋಗಿನಲ್ಲಿ ಸ್ನೇಹಿತರಿಂದಲೇ ಸ್ನೇಹಿತನನ್ನ ಹತ್ಯೆಗೈದ ಘಟನೆ  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮದನಪಲ್ಲಿ ರಸ್ತೆಯ ಐಮರೆಡ್ಡಿಹಳ್ಳಿಯ ಬಾಲಾಜಿ ಡಾಬಾ ಬಳಿ ನಡೆದಿದೆ. ನವೀನ್ ರೆಡ್ಡಿ(28) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. 

ಮೃತ ನವೀನ್ ರೆಡ್ಡಿ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದ ನಿವಾಸಿಯಾಗಿದ್ದಾನೆ ಅಂತ ತಿಳಿದು ಬಂದಿದೆ. ನವೀನ್‌ಗೆ ಕಂಠ ಪೂರ್ತಿ ಮದ್ಯ ಕುಡಿಸಿ ಅಮಲಿನಲ್ಲಿ ಕೊಲೆ ಮಾಡಲಾಗಿದೆ. 

ಬೆಂಗಳೂರು: ರೈಸ್‌ ಪುಲ್ಲಿಂಗ್‌ ಯಂತ್ರದ ಹೆಸರಲ್ಲಿ ವಂಚನೆ, ಮಂದಿ ಬಂಧನ

ಕೊಲೆ ಮಾಡಿದವರೂ ಕೂಡ ಅದೇ ಗ್ರಾಮದವ ಸಿದ್ದು, ಕಿರಣ್, ಬೈರಾರೆಡ್ಡಿ ಅಂತ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಚಿಂತಾಮಣಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯತ್ಯ ಎಸೆಗಿದ ಬಳಿಕ ಹಂತಕರು ಪೊಲೀಸರಿಗೆ ಶರಣಾಗಿದ್ದಾರೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karunya Ram Sister Case: ಒಡಹುಟ್ಟಿದ ತಂಗಿ ವಿರುದ್ಧವೇ ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯಾ ರಾಮ್
ರೀಲ್ಸ್‌ ತಂದ ಆಪತ್ತು; ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಾದ ನವಜೋಡಿ ಆಸ್ಪತ್ರೆಗೆ ಶಿಫ್ಟ್