
ಬೆಳಗಾವಿ(ಡಿ.30): ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಶಂಕೆಯಿಂದ ಅಳಿಯನನ್ನ ಮಾವನೇ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ.
ನೀಲಪ್ಪ ರೋಗನ್ನವರ್(28) ಕೊಲೆಯಾದ ದುರ್ದೈವಿಯಾಗಿದ್ದಾನೆ. ಸ್ವಂತ ಅಳಿಯನನ್ನೇ ಕತ್ತು ಹಿಸುಕಿ ಪಾಪಿ ಮಾವ ಕೊಲೆಗೈದಿದ್ದಾನೆ. ಫಕೀರಪ್ಪ ಮನಿಹಾಳ ಸ್ವಂತ ಅಳಿಯನನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ.
ಬೆಂಗಳೂರು ಹನುಮ ಜಯಂತಿಯಲ್ಲಿ ಅನ್ನದಾನ ಮಾಡುತ್ತಿದ್ದವನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ಆರೋಪಿ ಫಕೀರಪ್ಪ ಅಳಿಯ ನೀಲಪ್ಪನನ್ನ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದನು. ಕೊಲೆ ಮಾಡಿ ಬೈಕ್ ಅಪಘಾತ ಎಂಬಂತೆ ಬಿಂಬಿಸಲು ಹೋಗಿದ್ದ ಆರೋಪಿ ಫಕೀರಪ್ಪ. ಇದು ಅಪಘಾತ ಅಲ್ಲ, ಕೊಲೆ ಎಂದು ಗೊತ್ತಾಗ್ತಿದ್ದಂತೆ ಫಕೀರಪ್ಪನನ್ನು ಕಟಕೋಳ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ