ಪೊಲೀಸ್‌ ಪರೀಕ್ಷೆಯಲ್ಲಿ ಚಾಲಾಕಿತನದಿಂದ ನಕಲು : ಬಂಧನ

Kannadaprabha News   | Asianet News
Published : Nov 24, 2020, 07:20 AM IST
ಪೊಲೀಸ್‌ ಪರೀಕ್ಷೆಯಲ್ಲಿ ಚಾಲಾಕಿತನದಿಂದ ನಕಲು : ಬಂಧನ

ಸಾರಾಂಶ

ಪೊಲೀಸ್ ಪರೀಕ್ಷೆಯಲ್ಲಿ ಚಾಲಾಕಿತನದಲ್ಲಿ ನಕಲು ಮಾಡುತ್ತಿದ್ದವರನ್ನು ಬಂಧಿಸಲಾಗಿದೆ. ಮೂವರು ಬಂಧಿತರಾಗಿದ್ದಾರೆ

ಬೆಂಗಳೂರು (ನ.24): ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ) ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟುತ್‌ ಬಳಸಿ ನಕಲು ಮಾಡುತ್ತಿದ್ದ ಅಭ್ಯರ್ಥಿಗಳನ್ನು ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ಬಂಧಿಸಿದ್ದರೆ, ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ ಮತ್ತು ಒಬ್ಬ ಆರೋಪಿಯನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.

 ಬ್ಲೂಟುತ್‌ ಬಳಸಿದ್ದ ಜಮಖಂಡಿಯ ಹನುಮಂತ ಗಂಗಪ್ಪ ಬಿಲ್ಲೂರ್‌ ಬೆಂಗಳೂರಿನ ಇಂದಿರಾನಗರದ ಕೆಎಸ್‌ಇಇ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ. ಅದೇ ರೀತಿ ಬಾಗಲಕೋಟೆ ನಗರದ ವಿದ್ಯಾಗಿರಿಯ ಪಬ್ಲಿಕ್‌ ಶಾಲೆಯಲ್ಲಿ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದ ಶ್ರೀಮಂತ ಸದಲಗಿ ಕೂಡ ಬ್ಲೂಟುತ್‌ ಬಳಸಿ ಪರೀಕ್ಷೆ ಬರೆಯುತ್ತಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಉಪನ್ಯಾಸಕರ ಹುದ್ದೆ ನೇಮಕಾತಿ: ಆದೇಶ ಸಿಕ್ಕರೂ ಸೇವಾ ಭದ್ರತೆ ಇಲ್ಲ..! . 

ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಆರೋಪಿಗಳಾದ ಗೋಕಾಕ್‌ನ ಗುರುನಾಥ್‌ (20) ಮತ್ತು ಮಹಾಂತೇಶ್‌ (24) ಅವರನ್ನು ಬೆಂಗಳೂರಿನಲ್ಲಿ, ಗೋಕಾಕ್‌ನ ಮಲ್ಲಪ್ಪ (26) ಅವರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!