
ಕೋಲಾರ, (ಅ.10): ಜಿಲ್ಲೆಯ ಬಂಗಾರಪೇಟೆ ಹೊರವಲಯದ ಕುಂಬಾರಪಾಳ್ಯದಲ್ಲಿ ಶನಿವಾರ 3 ಮಕ್ಕಳು ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯ ಕೊಳೆಗೇರಿಯ ಸಾದಿಕ್ (12), ಫಯಾಜ್ (7) ಮತ್ತು ಮೋಹಿಕ್ (8) ಮೃತಪಟ್ಟ ಮಕ್ಕಳು. ಕುಂಬಾರಪಾಳ್ಯ ಸಮೀಪದ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕಾಣೆಯಾಗಿದ್ದ ಯುವತಿ ದೊಡ್ಡಪ್ಪನ ಜಮೀನಿನಲ್ಲಿ ಶವವಾಗಿ ಪತ್ತೆ
ರೈಲ್ವೆ ಕೆಳ ಸೇತುವೆಯಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಹಾಗೂ ಜನರ ಓಡಾಟಕ್ಕೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ರೈಲ್ವೆ ಅಧಿಕಾರಿಗಳು ಕೆಳ ಸೇತುವೆಯಿಂದ ಮಳೆ ನೀರು ಹೊರಗೆ ಹರಿದು ಹೋಗಲು ಸುಮಾರು 200 ಮೀಟರ್ ದೂರದವರೆಗೆ ಕಾಲುವೆ ತೋಡಿಸಿದ್ದರು.
10 ಅಡಿ ಆಳವಿರುವ ಕಾಲುವೆಯಲ್ಲಿ 7 ಅಡಿಗೂ ಹೆಚ್ಚು ಮಳೆ ನೀರು ನಿಂತಿತ್ತು. ಕಾಲುವೆ ಬಳಿ ಹೋಗಿರುವ ಮಕ್ಕಳು ಆಕಸ್ಮಿಕವಾಗಿ ಒಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಲುವೆ ಸುತ್ತಮುತ್ತ ಕೃಷಿ ಜಮೀನುಗಳಿದ್ದು, ನಿರ್ಜನ ಪ್ರದೇಶವಾದ ಆ ಭಾಗದಲ್ಲಿ ಜನರ ಓಡಾಟ ಕಡಿಮೆ ಇರುತ್ತದೆ. ಕುರಿಗಾಹಿಗಳು ಕಾಲುವೆ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಬಂಗಾರಪೇಟೆ ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ