ಕಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು!

Published : Nov 28, 2023, 06:45 AM IST
ಕಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು!

ಸಾರಾಂಶ

ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗಿರಿಶ್, ಧನು ಮತ್ತು ಡಂಕಣಾಚಾರಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು. 

ಬಂಗಾರಪೇಟೆ (ನ.28): ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗಿರಿಶ್, ಧನು ಮತ್ತು ಡಂಕಣಾಚಾರಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು. ಸೋಮವಾರ ಬೆಳಗ್ಗೆ ತಿಂಡಿ ತಿಂದ ಬಳಿಕ ಎಂದಿನಂತೆ ನೀರು ಕುಡಿದಾಗ ಈ ಘಟನೆ ನಡೆದಿದೆ.

ನೀರು ಕುಡಿದು ಅಸ್ವಸ್ಥರಾದ ಮಕ್ಕಳು

ಸೋಮವಾರ ವಸತಿ ಶಾಲೆಯಲ್ಲಿರುವ ಸುಮಾರು ೨೫೦ಕ್ಕೂ ಹೆಚ್ಚಿನ ಮಕ್ಕಳು ಬೆಳಗ್ಗಿನ ತಿಂಡಿ ಮುಗಿದ ಬಳಿಕ ಅಲ್ಲಲ್ಲಿ ಅಳವಡಿಸಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಮಕ್ಕಳು ನೀರು ಕುಡಿದರು. ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಶುದ್ಧ ನೀರಿನ ಒಂದು ಘಟಕದಲ್ಲಿ ನೀರು ಕುಡಿದ ಮೂವರು ಮಕ್ಕಳು ಮಾತ್ರ ವಾಂತಿ, ಭೇದಿ ಮಾಡಿಕೊಂಡು ಅಸ್ವಸ್ಥರಾದರು.

 

ಕುಡಿಯುವ ನೀರಿಗೆ ಆಧಾರವಾಗಿದ್ದ ಅರ್ಕಾವತಿ ನದಿ‌ ಕಲುಷಿತ; ಡಿಸಿಎಂ ತವರು ಜಿಲ್ಲೆಗೇ ಇದೆಂಥ ದುಸ್ಥಿತಿ!

ಇದರಿಂದ ಗಾಬರಿಗೊಂಡ ವಸತಿ ಶಾಲೆಯ ಶಿಕ್ಷಕರು ತಕ್ಷಣವೇ ಮೂವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಮೂವರು ವಿದ್ಯಾರ್ಥಿಗಳಿಗೆ ಯಾವುದೇ ಅಪಾಯವಿಲ್ಲದೆ ಚೇತರಿಸಿಕೊಳ್ಳುತ್ತಿದ್ದಾರೆ.

ಕಲುಷಿತ ನೀರು ಸೇವಿಸಿ 20ಕ್ಕೂ ಅಧಿಕ ಮಕ್ಕಳು ಅಸ್ವಸ್ಥ: ಸಿಎಂ ಎಚ್ಚರಿಕೆ ನೀಡಿದ್ದರೂ ಮುಂದುವರಿದ ನಿರ್ಲಕ್ಷ್ಯ!

ಸುದ್ದಿ ತಿಳಿದು ವಸತಿ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು ಘಟನೆಗೆ ಕಾರಣವನ್ನು ಶೋಧ ಮಾಡುತ್ತಿದ್ದಾರೆ. ಒಂದು ಮೂಲಕ ಪ್ರಕಾರ ಶುದ್ಧ ನೀರಿನ ಯಂತ್ರದ ಪಕ್ಕದಲ್ಲೆ ಜಿರಲೆ ಔಷಧಿ ಇಟ್ಟಿದ್ದರು ಎನ್ನಲಾಗಿದೆ. ಆ ಜಿರಲೆ ಔಷಧಿ ಆಕಸ್ಮಿಕವಾಗಿ ನೀರಿನಲ್ಲಿ ಬೆರೆತಿರಬಹುದು ಎಂದು ಶಂಕಿಸಲಾಗಿದೆ. ಕಾಮಸಮುದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!