ಲಾರಿ ಪಲ್ಟಿ: ಮದುವೆಗೆ ಹೊರಟಿದ್ದ ಮೂವರು ಸಾವು, 17ಕ್ಕೂ ಹೆಚ್ಚು ಜನರಿಗೆ ಗಾಯ

Published : Jan 29, 2020, 09:31 PM IST
ಲಾರಿ ಪಲ್ಟಿ: ಮದುವೆಗೆ ಹೊರಟಿದ್ದ ಮೂವರು ಸಾವು, 17ಕ್ಕೂ ಹೆಚ್ಚು ಜನರಿಗೆ ಗಾಯ

ಸಾರಾಂಶ

ಚಾಲಕ ನಿಯಂತ್ರಣ ತಪ್ಪಿ ಮೈಲು ಗಲ್ಲಿಗೆ ಡಿಕ್ಕಿ ಹೊಡೆದ ದಿಬ್ಬಣದ ಲಾರಿ| ಮೂರು ಜನ ಮಹಿಳೆರು ಸ್ಥಳದಲ್ಲಿಯೇ ಸಾವು| ಚನ್ನಗಿರಿ ತಾಲೂಕಿನ ಮಾವಿಕಟ್ಟೆ ಗ್ರಾಮದ ಬಳಿ ಘಟನೆ.

ದಾವಣಗೆರೆ, [ಜ.29]: ಮದುವೆಗೆ ಹೊರಟಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ದುರ್ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಮತ್ತು ಹಂಚಿನಸಿದ್ದಾಪುರದ ಮಧ್ಯೆ ಘಡನೆ ನಡೆದಿದೆ. ಆಂಧ್ರಪ್ರದೇಶದ ಹಿಂದುಪುರದ ನಾಗರತ್ನಮ್ಮ (70), ಶಿವಮೊಗ್ಗದ ವರಲಕ್ಷ್ಮೀ (60), ಅನುಷಾ (25) ಮೃತಪಟ್ಟ ದುರ್ದೈವಿಗಳು.

ಬೆಂಕಿ ಹಚ್ಚಿದ ಪ್ರಿಯತಮೆ, ಫಲಿಸದ ಚಿಕಿತ್ಸೆ : ಕೊನೆಯುಸಿರೆಳೆದ ಯುವಕ

ಆಂಧ್ರಪ್ರದೇಶದ ಹಿಂದುಪುರದಿಂದ ಶಿವಮೊಗ್ಗಕ್ಕೆ ಮದುವೆ ದಿಬ್ಬಣ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮೈಲುಗಲ್ಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರಂತ ಸಂಭವಿಒಸಿದೆ. 

ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಶವಗಳನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು