
ರಾಯಚೂರು/ಬೆಳಗಾವಿ, [ಮಾ.10]: ಗೆಳೆಯರ ಜೊತೆ ಈಜಲು ಹೋದ ಯುವಕನೊಬ್ಬ ಕೃಷ್ಣಾನದಿ ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ
ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ನಡೆದಿದೆ.
ಬಾವನಸೌಂದತ್ತಿ ನಿವಾಸಿ ಸಾಗರ ಪಾಂಡು ಯಮಾಜೆ(24) ನೀರು ಪಾಲಾದ ಯುವಕ. ಮಂಗಳವಾರ ಬೆಳಗ್ಗೆ ಗೆಳೆಯರ ಜೊತೆಗೆ ಈತ ಈಜಲು ಹೋಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕರ್ನಾಟಕದಲ್ಲಿ 4 ಕರೋನಾ ಪಾಸಿಟಿವ್, ಎಂಪಿಯಲ್ಲಿ ಕಾಂಗ್ರೆಸ್ಗೆ ಎಲ್ಲವೂ ನೆಗೆಟಿವ್..ಮಾ. 10ರ ಟಾಪ್ 10 ಸುದ್ದಿ
ನಂತರ ರಾಯಬಾಗ ತಹಸೀಲ್ದಾರ್ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಗ್ರಾಮಸ್ಥರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರಗೆ ತರಲಾಯಿತು.
ರಾಯಚೂರಿನಲ್ಲಿ ಕೆರೆ ಪಾಲಾದ ಬಾಲಕ
ಹೋಳಿ ಹಬ್ಬದ ನಿಮಿತ್ತ ಬಣ್ಣದೊಕಳಿ ಆಟವಾಡಿ ಕೆರೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲಾಗಿದ್ದಾನೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಹರವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಪ್ರಭಾಕರಗೌಡ ಸಣ್ಣಗೌಡ ಎಂಬುವವರ ಮಗ ಮಲ್ಲಿಕಾರ್ಜುನ(14) ಸಾವು. ಬಣ್ಣದಾಟ ಆಡಿ ನಂತರ ಸ್ನಾನ ಮಾಡಲು ಕೆರೆಗೆ ಹೋದಾಗ ಘಟನೆ
ಹೋಳಿ ಮುಗಿಸಿ ಸ್ನಾನ ಮಾಡಲು ಹೋಗಿದ್ದ ಯುವಕ ನೀರುಪಾಲು
ಹೌದು...ಕಂಪ್ಲಿ ಮೂಲದ ಯುವಕ ಕೃಷ್ಣ (24) ಹೋಳಿ ಹುಣ್ಣಿಮೆಯ ಪ್ರಯುಕ್ತ ಬಣ್ಣದೋಕುಳಿ ಆಡಿ ಬಳಿಕ ಬಣ್ಣ ತೊಳೆದುಕೊಳ್ಳಲು ಹೋಗಿದ್ದ ಯುವಕ ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಚಿಕ್ಕ ಜಂತಕಲ್ ಗ್ರಾಮದ ತುಂಗಭದ್ರಾ ಬಳಿ ಇರೋ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ. ಆದ್ರೆ, ಈಜು ಬಾರದೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ