30 ಜನ ಅಯ್ಯಪ್ಪ ಪಾದಯಾತ್ರಿಗಳಿಗೆ ಕಾರು ಡಿಕ್ಕಿ, 1 ಸಾವು!

Published : Dec 11, 2023, 05:42 AM IST
30 ಜನ ಅಯ್ಯಪ್ಪ ಪಾದಯಾತ್ರಿಗಳಿಗೆ ಕಾರು ಡಿಕ್ಕಿ, 1 ಸಾವು!

ಸಾರಾಂಶ

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆಗೆ ಪಾದಯಾತ್ರೆ ಹೊರಟಿದ್ದ ಸುಮಾರು 30 ಮಂದಿಯಿದ್ದ ತಂಡದ ಮೇಲೆ ಕಾರೊಂದು ಹರಿದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಉಳಿದವರು ಅದೃಷ್ಟವಶಾತ್‌ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಚಿಕ್ಕಬಳ್ಳಾಪುರ (ಡಿ.11) :  ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆಗೆ ಪಾದಯಾತ್ರೆ ಹೊರಟಿದ್ದ ಸುಮಾರು 30 ಮಂದಿಯಿದ್ದ ತಂಡದ ಮೇಲೆ ಕಾರೊಂದು ಹರಿದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಉಳಿದವರು ಅದೃಷ್ಟವಶಾತ್‌ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಆಂಧ್ರ ಮೂಲದ ವೆಂಕಟೇಶ್‌(55) ಮೃತ ದುರ್ದೈವಿ. ಮಾಲೆಧಾರಿಗಳು ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ಪಟ್ಟಣದಿಂದ ಚಿಕ್ಕಬಳ್ಳಾಪುರದ ಗೌರಿಬಿದನೂರಿಗೆ ಪಾದಯಾತ್ರೆ ಮೂಲಕ ಆಗಮಿಸುತ್ತಿದ್ದರು. ಈ ವೇಳೆ ಚೌಳೂರು ಕಡೆಯಿಂದ ಬಂದ ಕಾರು ಏಕಾಏಕಿ ಅಯ್ಯಪ್ಪ ಸ್ವಾಮಿ‌ ಮಾಲಾಧಾರಿಗಳ‌ತ್ತ ನುಗ್ಗಿದೆ. ಆಗ ಮಾಲಾಧಾರಿಗಳು ದಿಕ್ಕಾಪಾಲಾಗಿದ್ದು, ಆದರೆ ವೆಂಕಟೇಶ್ ಮಾತ್ರ ಕಾರಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಪ್ರಹ್ಲಾದ್ ಹಾಗೂ ಮಣಿಕಂಠ ಎನ್ನುವವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಗೌರಿಬಿದನೂರಿನ ಸಾರ್ವಜನಿಕ ‌ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರ ಸಾವು

ರಸ್ತೆ ಅಪಘಾತ ಓರ್ವನ ಸಾವು; ಇಬ್ಬರ ಸ್ಥಿತಿ ಗಂಭೀರ

ಕಾರ್ಕಳ: ಬಸ್‌-ಬೊಲೆರೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಡೆದಿದೆ.

ನಂದಳಿಕೆ ಕಡೆಯಿಂದ ಬರುತ್ತಿದ್ದ ಬೋಲೆರೊ ಕಾರು, ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೊಲೆರೋದಲ್ಲಿದ್ದ ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ (48) ಸ್ಥಳದಲ್ಲೇ ಮೃತಪಟ್ಟರೆ, ಮಂಜು (45), ಸುಜಯ (28) ಅವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ನಂದಳಿಕೆಗೆ ಬೆಳಗ್ಗೆ ಬಂದಿದ್ದ ಕುಟುಂಬದ ಸದಸ್ಯರು, ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನದ ಭೋಜನ ಮುಗಿಸಿ ಹಿಂದಿರುಗುವ ಸಂದರ್ಭ ಈ ಘಟನೆ ಸಂಭವಿಸಿದೆ.

ಚಿತ್ರದುರ್ಗ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಅಪಘಾತ: ಇಬ್ಬರ ಸಾವು, ಹಲವರ ಸ್ಥಿತಿ ಗಂಭೀರ

ಅಪಘಾತದಲ್ಲಿ ಮೃತರಾದ ಕುಟುಂಬ ಗುರಿಕಾರ ಶಿವಪ್ಪ ಅವರೇ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು.

ಬಸ್‌ನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!