ಕ್ಯಾಂಟರ್​ ಪಲ್ಟಿ; ದೇಗುಲದಿಂದ ವಾಪಸ್​ ಬರುತ್ತಿದ್ದ 30 ಮಂದಿಗೆ ಗಾಯ

Published : Jan 12, 2020, 04:03 PM IST
ಕ್ಯಾಂಟರ್​ ಪಲ್ಟಿ; ದೇಗುಲದಿಂದ ವಾಪಸ್​ ಬರುತ್ತಿದ್ದ 30 ಮಂದಿಗೆ ಗಾಯ

ಸಾರಾಂಶ

ಕ್ಯಾಂಟರ್‌ವೊಂದು ಪಲ್ಟಿಯಾದ ಪರಿಣಾಮ ಪೂಜೆ ಮುಗಿಸಿ ವಾಪಸ್​ ಆಗುತ್ತಿದ್ದ ಒಂದೇ ಗ್ರಾಮದ  ಬರೋಬ್ಬರಿ  30 ಮಂದಿಗೆ ಗಾಯಗೊಂಡಿದ್ದಾರೆ.

ಮಂಡ್ಯ,(ಜ.12): ಕ್ಯಾಂಟರ್​ ಪಲ್ಟಿಯಾಗಿ 30 ಮಂದಿ ಗಾಯಗೊಂಡ ಘಟನೆ ಇಂದು (ಭಾನುವಾರ) ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ.

ಮುತ್ತತ್ತಿಯ ಮುತ್ತೆತ್ತರಾಯಸ್ವಾಮಿ ದೇವಾಲಯಕ್ಕೆ ತೆರಳಿದ್ದ ಮಂಡ್ಯ ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು ಪೂಜೆ ಮುಗಿಸಿ ವಾಪಸ್​ ಬರುವಾಗ ಅವಘಡ ಸಂಭವಿಸಿದೆ. 

ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ಉರುಳಿ 12 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಗಾಯಾಳುಗಳಿಗೆ ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. 

ಈ ಬಗ್ಗೆ ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!
ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS