ಕ್ಯಾಂಟರ್​ ಪಲ್ಟಿ; ದೇಗುಲದಿಂದ ವಾಪಸ್​ ಬರುತ್ತಿದ್ದ 30 ಮಂದಿಗೆ ಗಾಯ

By Suvarna NewsFirst Published Jan 12, 2020, 4:03 PM IST
Highlights

ಕ್ಯಾಂಟರ್‌ವೊಂದು ಪಲ್ಟಿಯಾದ ಪರಿಣಾಮ ಪೂಜೆ ಮುಗಿಸಿ ವಾಪಸ್​ ಆಗುತ್ತಿದ್ದ ಒಂದೇ ಗ್ರಾಮದ  ಬರೋಬ್ಬರಿ  30 ಮಂದಿಗೆ ಗಾಯಗೊಂಡಿದ್ದಾರೆ.

ಮಂಡ್ಯ,(ಜ.12): ಕ್ಯಾಂಟರ್​ ಪಲ್ಟಿಯಾಗಿ 30 ಮಂದಿ ಗಾಯಗೊಂಡ ಘಟನೆ ಇಂದು (ಭಾನುವಾರ) ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ.

ಮುತ್ತತ್ತಿಯ ಮುತ್ತೆತ್ತರಾಯಸ್ವಾಮಿ ದೇವಾಲಯಕ್ಕೆ ತೆರಳಿದ್ದ ಮಂಡ್ಯ ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು ಪೂಜೆ ಮುಗಿಸಿ ವಾಪಸ್​ ಬರುವಾಗ ಅವಘಡ ಸಂಭವಿಸಿದೆ. 

ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ಉರುಳಿ 12 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಗಾಯಾಳುಗಳಿಗೆ ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. 

ಈ ಬಗ್ಗೆ ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!