ಮದ್ದೂರು: ಕೆಲಸದ ಒತ್ತಡಕ್ಕೆ ಎಂಜಿನಿಯರ್‌ ಆತ್ಮಹತ್ಯೆ

Published : Dec 15, 2024, 06:14 PM IST
ಮದ್ದೂರು: ಕೆಲಸದ ಒತ್ತಡಕ್ಕೆ ಎಂಜಿನಿಯರ್‌ ಆತ್ಮಹತ್ಯೆ

ಸಾರಾಂಶ

ಎಂಜಿನಿಯರ್‌ ಜ್ಞಾನೇಶ್ ಆತ್ಮಹತ್ಯೆ ಬಗ್ಗೆ ಸುದ್ದಿ ತಿಳಿದ ಈತನ ಚಿಕ್ಕಪ್ಪ ಜ್ಞಾನೇಶ್ ಸಾವಿಗೆ ಬಾಪೂಜಿ ಕಂಪನಿ ಮಾಲೀಕರೇ ಕಾರಣರಾಗಿದ್ದಾರೆ. ಸ್ಥಳಕ್ಕೆ ಧಾವಿಸಿ ಮೃತನ ಸಾವಿಗೆ ಸೂಕ್ತ ಪರಿಹಾರ ನೀಡುವವರೆಗೆ ಶವವನ್ನು ಇಲ್ಲಿಂದ ಸಾಗಿಸಿ ಶವ ಪರೀಕ್ಷೆ ನಡೆಸಲು ಅನುಮತಿ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ನಡೆಸಿದರು. 

ಮದ್ದೂರು(ಡಿ.15): ಕೆಲಸದ ಒತ್ತಡದಿಂದ ಬೇಸತ ಎಂಜಿನಿಯರ್ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ಕುರುಬರ ದೊಡ್ಡಿ ಗ್ರಾ ಮದಲ್ಲಿ ಶನಿವಾರ ಮುಂಜಾನೆ ಜರುಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹೆಮ್ಮತಿ ಗ್ರಾಮದ ಜ್ಞಾನೇಶ್ (30) ಆತ್ಮಹತ್ಯೆಗೆ ಶರಣಾದ ಎಂಜಿನಿಯರ್‌.

ತಾಲೂಕಿನ ಹೆಬ್ಬೆರಳು ಗ್ರಾಮ ಸಮೀಪದಲ್ಲಿ ಶಿಂಷಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿಗೆ ಗುತ್ತಿಗೆ ಪಡೆದಿರುವ ಮೈಸೂರಿನ ಬಾಪೂಜಿ ಇನ್ಸ್ ಟ್ರಕ್ಷನ್ಸ್ ಕಂಪನಿಯಲ್ಲಿ ಜ್ಞಾನೇಶ ಹಲವು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಎಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡು ಕೆಸ್ತೂರು ಗ್ರಾಮ ದಲ್ಲಿ ವಾಸವಾಗಿದ್ದರು. 

Bengaluru techie Atul Subhash Case: ನಿನ್ನಂತೆ ಹೆದರಿದ್ದರೆ ಜಗತ್ತಿನಲ್ಲಿ ಅರ್ಧದಷ್ಟು ಹೆಂಗಸರೇ ಖಾಲಿ!

ಅವಿವಾಹಿತರಾಗಿದ್ದ ಈತ ಶನಿವಾರ ಮುಂಜಾನೆ ಕಾಮಗಾರಿ ಸ್ಥಳಕ್ಕೆ ಆಗಮಿಸಿ ತಮ್ಮ ಮೊಬೈಲ್‌ ವಾಟ್ಸಾಪ್ ಮೂಲಕ ವರ್ಕ್ ಪ್ರೆಶರ್‌ನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖ ಮಾಡಿದ ನಂತರ ನೀರಿನ ಟ್ಯಾಂಕ್ ಏರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಎಂಜಿನಿಯರ್‌ ಜ್ಞಾನೇಶ್ ಆತ್ಮಹತ್ಯೆ ಬಗ್ಗೆ ಸುದ್ದಿ ತಿಳಿದ ಈತನ ಚಿಕ್ಕಪ್ಪ ಜ್ಞಾನೇಶ್ ಸಾವಿಗೆ ಬಾಪೂಜಿ ಕಂಪನಿ ಮಾಲೀಕರೇ ಕಾರಣರಾಗಿದ್ದಾರೆ. ಸ್ಥಳಕ್ಕೆ ಧಾವಿಸಿ ಮೃತನ ಸಾವಿಗೆ ಸೂಕ್ತ ಪರಿಹಾರ ನೀಡುವವರೆಗೆ ಶವವನ್ನು ಇಲ್ಲಿಂದ ಸಾಗಿಸಿ ಶವ ಪರೀಕ್ಷೆ ನಡೆಸಲು ಅನುಮತಿ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ನಡೆಸಿದರು. 

ನಂತರ ಸ್ಥಳದಲ್ಲಿದ್ದ ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ಅವರು ಕುಟುಂಬದವರನ್ನು ಮನವೊಲಿಸಿದ ನಂತರ ಜ್ಞಾನೇಶ್ ಮರಣೋತ್ತರ ಪರೀಕ್ಷೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಸಂಜೆ ಸಾಗಿಸಲಾಯಿತು. ಈ ಸಂಬಂಧ ಕೆಸ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!