
ಧಾರವಾಡ(ಜು.23): ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನ ಬರ್ಬರ ಕೊಲೆ ಮಾಡಿದ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಲೇಔಟ್ವೊಂದರಲ್ಲಿ ಇಂದು(ಮಂಗಳವಾರ) ನಡೆದಿದೆ. ಹರೀಶ್ ಶಿಂಧೆ(30) ಎಂಬಾತನೇ ಕೊಲೆಯಾದ ಯುವಕ.
ಕೊಲೆಯಾದ ಹರೀಶ್ ಧಾರವಾಡದ ಮಣಿಕಿಲ್ಲಾದ ಡೋರಗಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ. ಹರೀಶ್ ಶಿಂಧೆ ವೃತ್ತಿಯಲ್ಲಿ ಟೈಲ್ಸ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ನಿನ್ನೆ(ಸೋಮವಾರ) ರಾತ್ರಿ ಮನೆ ಬಿಟ್ಟಿರೋನು ಮನೆಗೆ ಬಾರದ ಹಿನ್ನಲೆಯಲ್ಲಿ ಬೆಳಿಗ್ಗೆ ಪೋಲಿಸರ ಮನೆಯವರಿಗೆ ಮಾಹಿತಿ ಕೊಟ್ಟ ಬಳಿಕ ಕೊಲೆಯ ಬಗ್ಗೆ ಮನೆಯವರಿಗೆ ಗೊತ್ತಾಗಿದೆ.
ಹುಬ್ಬಳ್ಳಿ: ಕುಟುಂಬದಲ್ಲಿನ ಸಾವಿಗೆ ಅರ್ಚಕ ಕಾರಣ, ಹಂತಕ ಬಿಚ್ಚಿಟ್ಟ ಭಯಾನಕ ಸತ್ಯ..!
ಘಟನಾ ಸ್ಥಳಕ್ಕೆ ಎಸ್ಪಿ ಗೋಪಾಲ್ ಬ್ಯಾಕೋಡ, ಎಎಸ್ ಪಿ ನಾರಾಯಣ ಭರಮನಿ, ಸಿಪಿಐ ಕಮತಗಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೇಔಟ್ ಸಲುವಾಗಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ