
ಬೆಳ್ತಂಗಡಿ(ಫೆ.03): ಮುಂಡಾಜೆ ಗ್ರಾಮದಲ್ಲಿ ಅನಾರೋಗ್ಯದಿಂದಾಗಿ ಮಲಗಿದ ಸ್ಥಿತಿಯಲ್ಲೇ ಇರುವ ವ್ಯಕ್ತಿಯನ್ನು ಗುಣಪಡಿಸುವುದಾಗಿ ಹೇಳಿ ನಂಬಿಸಿದ ಇಬ್ಬರು ಅಪರಿಚಿತರು, 30 ಸಾವಿರ ರು. ನಗದು ಪಡೆದುಕೊಂಡು ವಂಚಿಸಿ ಪರಾರಿಯಾದ ಘಟನೆ ನಡೆದಿದೆ.
ಮುಂಡಾಜೆ ಗ್ರಾಮದ ನಿವಾಸಿ ದಯಾನಂದ ವಂಚನೆಗೆ ಒಳಗಾದ ವ್ಯಕ್ತಿ. ದಯಾನಂದ ಅವರ ತಂದೆ ಕಟ್ಟಡದಿಂದ ಬಿದ್ದು ಸೊಂಟದ ಬಲ ಕಳೆದುಕೊಂಡು ಮಲಗಿದಲ್ಲಿಯೇ ಇದ್ದಾರೆ. ಜ.27ರಂದು ಇವರ ಮನೆಗೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ತಾವು ಆಯುರ್ವೇದ ಪಂಡಿತರಾಗಿದ್ದು ಪಂಚಕರ್ಮ ಆಯುರ್ವೇದ ಔಷಧಿಯಿಂದ ಅವರನ್ನು ಗುಣಪಡಿಸುವುದಾಗಿ ಹೇಳಿದ್ದಾರೆ.
ಕುಮಾರ ಪರ್ವತ ತಪ್ಪಲಲ್ಲಿ ಕಾಣಿಸಿದ ಒಂದೂವರೆ ಸಾವಿರಕ್ಕೂ ಹೆಚ್ಚು ಚಾರಣಿಗರು, ಕಂಗಾಲಾದ ಅರಣ್ಯಾಧಿಕಾರಿಗಳು!
ಇದಾದ ಬಳಿಕ ಚಿಕಿತ್ಸೆಗೆಂದು ಕೆಲವು ವಸ್ತುಗಳನ್ನು ತರಿಸಿಕೊಂಡಿದ್ದಾರೆ. ಬಳಿಕ ಇನ್ನಷ್ಟು ಔಷಧಿಗಳು ತರಬೇಕಂದು 30 ಸಾವಿರ ಹಣ ಪಡೆದುಕೊಂಡು ಮೊಬೈಲ್ ನಂಬರ್ ನೀಡಿ ತೆರಳಿದ್ದಾರೆ. ಅವರು ವಾಪಸ್ ಬಾರದಾಗ ಅವರು ನೀಡಿದ ಸಂಖ್ಯೆಯನ್ನು ಸಂಪರ್ಕಿಸಿದಾಗ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅಪರಿಚಿತರಿಂದ ಮೋಸ ಹೋಗಿರುವುದು ಗೊತ್ತಾಗಿ ಇದೀಗ ದಯಾನಂದ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ