
ಚಿಕ್ಕೋಡಿ(ಜೂ.14): ಅತ್ತೆಯ ಕಾಟದಿಂದ ಸೊಸೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಇಂದು(ಶುಕ್ರವಾರ) ನಡೆದಿದೆ. ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ.
ಮೃತಳ ಪತಿ ಬಾಳು ರೂಪನವರ ಅವರು ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯೋಧ ಬಾಳು ಅರುಣಾಚಲ ಪ್ರದೇಶ ಗ್ಯಾಂಟುಕನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅತ್ತೆ ಸೇವಂತಾ ಸಿದರಾಯ ರೂಪನವರ ಅವರು ರೂಪಾಬಾಯಿಗೆ ದಿನಂಪ್ರತಿ ಕಿರಿಕಿರಿ ಕೊಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಪತ್ನಿ ಅತ್ತಿಗೆ ಜೊತೆಗಿತ್ತು ಅಕ್ರಮ ಸಂಬಂಧ, ಸಾಬೀತುಪಡಿಸಲು ವ್ಯಕ್ತಿ ಆತ್ಮಹತ್ಯೆ!
ಅತ್ತೆಯ ಕಿರಿ ಕಿರಿ ಹಿನ್ನೆಲೆಯಲ್ಲಿ ಮನನೊಂದಿದ್ದ ರೂಪಾಬಾಯಿ ನೇಣಿಗೆ ಶರಣಾಗಿದ್ದಾಳೆ. ಮೃತ ರೂಪಾಬಾಯಿಗೆ ಎರಡು ಮಕ್ಕಳು ಇವೆ. ಘಟನಾ ಸ್ಥಳಕ್ಕೆ ಕಾಗವಾಡ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ