ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರ ಹೆಸರಲ್ಲಿ ಕರೆ ಮಾಡಿ ಮೋಸ: ಶಿಕ್ಷಕನಿಗೆ 32 ಲಕ್ಷ ವಂಚನೆ

Published : Sep 06, 2023, 07:43 AM IST
ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರ ಹೆಸರಲ್ಲಿ ಕರೆ ಮಾಡಿ ಮೋಸ: ಶಿಕ್ಷಕನಿಗೆ 32 ಲಕ್ಷ ವಂಚನೆ

ಸಾರಾಂಶ

ತಮ್ಮ ಹೆಸರಿನ ಐದು ಪಾಸ್‌ಪೋರ್ಟ್‌ಗಳ ಪತ್ತೆ ಸಂಬಂಧ ವಿಚಾರಣೆ ನಡೆಸಬೇಕಿದೆ ಎಂದು ಹೇಳಿ ಶಿಕ್ಷಕರೊಬ್ಬರಿಗೆ ಮಹಾರಾಷ್ಟ್ರದ ಮುಂಬೈ ನಗರದ ಕ್ರೈಂ ಬ್ರಾಂಚ್‌ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಸೈಬರ್‌ ವಂಚಕರು 32.25 ಲಕ್ಷ ದೋಚಿರುವ ಘಟನೆ ನಡೆದಿದೆ.

ಬೆಂಗಳೂರು (ಸೆ.06): ತಮ್ಮ ಹೆಸರಿನ ಐದು ಪಾಸ್‌ಪೋರ್ಟ್‌ಗಳ ಪತ್ತೆ ಸಂಬಂಧ ವಿಚಾರಣೆ ನಡೆಸಬೇಕಿದೆ ಎಂದು ಹೇಳಿ ಶಿಕ್ಷಕರೊಬ್ಬರಿಗೆ ಮಹಾರಾಷ್ಟ್ರದ ಮುಂಬೈ ನಗರದ ಕ್ರೈಂ ಬ್ರಾಂಚ್‌ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಸೈಬರ್‌ ವಂಚಕರು 32.25 ಲಕ್ಷ ದೋಚಿರುವ ಘಟನೆ ನಡೆದಿದೆ. ದೇವನಹಳ್ಳಿ ನಿವಾಸಿ ಚತುರ ರಾವ್‌ ಹಣ ಕಳೆದುಕೊಂಡಿದ್ದು, ಈ ಸಂಬಂಧ ಈಶಾನ್ಯ ವಿಭಾಗದ ಸಿಇಎನ್‌ ಠಾಣೆಯಲ್ಲಿ ರಾವ್‌ ದೂರು ದಾಖಲಿಸಿದ್ದಾರೆ.

ಆ.2ರಂದು ಫೆಡೆಕ್ಸ್‌ ಕೊರಿಯರ್‌ ಕಂಪನಿಯ ಪ್ರತಿನಿಧಿ ಹೆಸರಿನಲ್ಲಿ ಶಿಕ್ಷಕ ಚತುರರಾವ್‌ ಅವರಿಗೆ ಕಿಡಿಗೇಡಿ ಕರೆ ಮಾಡಿದ್ದಾನೆ. ಆಗ ನಿಮ್ಮ ಹೆಸರಿನಲ್ಲಿ ಕೊರಿಯರ್‌ ಪಾರ್ಸೆಲ್ ಬಂದಿದ್ದು, ಅದರಲ್ಲಿ ನಿಮ್ಮ ಮೊಬೈಲ್ ನಂಬರ್‌, ಆಧಾರ್‌ ನಂಬರ್‌, ಐದು ಪಾಸ್‌ಪೋರ್ಟ್‌, ಐದು ಕ್ರೆಡಿಟ್‌ ಕಾರ್ಡ್‌ ಮತ್ತು ಒಂದು ಲ್ಯಾಪ್‌ಟಾಪ್‌ ಪತ್ತೆಯಾಗಿವೆ. ಈ ಪ್ರಕರಣವನ್ನು ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರಿಗೆ ವರ್ಗಾಯಿಸಲಾಗಿದೆ ಎಂದಿದ್ದ. ಕೆಲ ಹೊತ್ತಿನ ಬಳಿಕ ಮತ್ತೆ ಕರೆ ಮಾಡಿ ಪಾಸ್‌ಪೋರ್ಟ್‌ ಪತ್ತೆ ಸಂಬಂಧ ವಿಚಾರಣೆಗೆ ವಿಡಿಯೋ ಕರೆ ಮೂಲಕ ಮಾತನಾಡಬೇಕಾಗುತ್ತದೆ. ಆದ್ದರಿಂದ ಸ್ಕೈಪ್‌ ಆ್ಯಪ್‌ ಡೌನ್‌ಲೋಡ್‌ ಮಾಡಿ ಎಂದು ಶಿಕ್ಷಕನಿಗೆ ಆರೋಪಿ ತಿಳಿಸಿದ್ದ. ಈ ಕರೆಯಿಂದ ಗಾಬರಿಗೊಂಡ ಶಿಕ್ಷಕರು, ಪೊಲೀಸರೇ ಇರಬಹುದು ಎಂದು ಭಾವಿಸಿ ವಿಡಿಯೋ ಕರೆ ಸ್ವೀಕರಿಸಿದ್ದರು.

ಪ್ರಾಣಿ ದಾಳಿ ತಡೆಯಲು ಅರಣ್ಯ ಒತ್ತುವರಿ ತೆರವು: ಸಿಎಂ ಸಿದ್ದು ಸೂಚನೆ

ತರುವಾಯ ಮುಂಬೈ ಕ್ರೈಂ ಬ್ರಾಂಚ್‌ನ ಆ್ಯಂಟಿ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದ ಅಧಿಕಾರಿ ಎಂದು ಪರಿಚಯಿಸಿಕೊಂಡ ವಿಡಿಯೋ ಕರೆ ಮಾಡಿದ್ದ ಮತ್ತೊಬ್ಬ, ಕೆಲವರು ನಿಮ್ಮ ಹೆಸರಿನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತಿಳಿದುಕೊಳ್ಳಬೇಕಾದರೆ ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣವನ್ನು ವರ್ಗಾಯಿಸಬೇಕು ಎಂದು ಸೂಚಿಸಿದ್ದ. ಅಂತೆಯೇ ಆರೋಪಿ ಸೂಚಿಸಿದ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ 32.25 ಲಕ್ಷವನ್ನು ಚತುರರಾವ್‌ ವರ್ಗಾಯಿಸಿದ್ದರು. ಈ ಹಣ ಸಂದಾಯವಾದ ಬಳಿಕ ಸಂಪರ್ಕ ಕಡಿತವಾಗಿದೆ. ಕೊನೆಗೆ ತಾವು ವಂಚನೆಗೆ ಒಳಗಾಗಿರುವುದು ಶಿಕ್ಷಕರಿಗೆ ಅರಿವಾಗಿದೆ. ನಂತರ ಈಶಾನ್ಯ ವಿಭಾಗದ ಸಿಇಎನ್‌ ಠಾಣೆಗೆ ತೆರಳಿ ಅವರು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!