
ಬೆಂಗಳೂರು(ಮೇ.19): ತಾನು ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಕೋಪಗೊಂಡು ಸ್ನೇಹಿತನಿಗೆ ಮದ್ಯಪಾನ ಮಾಡಿಸಿ ಬಳಿಕ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಬೊಮ್ಮಸಂದ್ರದ ನಿವಾಸಿ ಗಜೇಂದ್ರ ಸೌದ್ (32) ಕೊಲೆಯಾದ ದುರ್ದೈವಿ. ಈ ಕೃತ್ಯ ಸಂಬಂಧ ಮೈಸೂರಿನ ಸಂತೋಷ್ನನ್ನು ಪೊಲೀಸರು ಬಂಧಿಸಿದ್ದಾರೆ. ಡೈರಿ ಸರ್ಕಲ್ ಸಮೀಪದ ಬಾರ್ನಲ್ಲಿ ಈ ಗೆಳೆಯರು ಶುಕ್ರವಾರ ರಾತ್ರಿ ಮದ್ಯ ಸೇವಿಸಿದ್ದಾರೆ. ನಂತರ ಕಂಠಮಟ ಮದ್ಯ ಸೇವಿಸಿ ಅರೆ ಪ್ರಜ್ಞೆಯಲ್ಲಿದ್ದ ಗಜೇಂದ್ರ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯನ್ನು ಎತ್ತಿ ಹಾಕಿ ಸಂತೋಷ್ ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡು ಆತ ಮೃತಪಟ್ಟಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಪತ್ನಿಯ ಕೊಂದು ಆಕೆಯ ಮೃತದೇಹದ ಜೊತೆ ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳಿಸಿದ ಪತಿ!
ಮೃತ ಗಜೇಂದ್ರ ಮೂಲತಃ ನೇಪಾಳ ದೇಶದವನಾಗಿದ್ದು, ಎಂಟು ವರ್ಷಗಳ ಹಿಂದೆ ಬೆಂಗಳೂರಿಗೆ ತನ್ನ ಪರಿವಾರ ಸಮೇತ ಆತ ಬಂದಿದ್ದ. ಯಲಹಂಕ ಉಪನಗರದ ಬಳಿ ಹೋಟೆಲ್ನಲ್ಲಿ ಕೆಲಸಕ್ಕೆ ಸೇರಿದ್ದ ಗಜೇಂದ್ರ, ತನ್ನ ಕುಟುಂಬದ ಜತೆ ಚಿಕ್ಕಬೊಮ್ಮಸಂದ್ರದಲ್ಲಿ ವಾಸವಾಗಿದ್ದ. ಆ ಹೋಟೆಲ್ನಲ್ಲಿ ಸಂತೋಷ್ ಕೂಡ ಕೆಲಸ ಮಾಡುತ್ತಿದ್ದ. ಆಗ ಕೆಲಸದ ವಿಚಾರವಾಗಿ ಇಬ್ಬರ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಷಯವಾಗಿ ಪರಸ್ಪರ ಜಗಳ ಸಹ ಆಗಿದ್ದವು. ಕೊನೆಗೆ ಆಶಿಸ್ತು ಹಿನ್ನೆಲೆಯಲ್ಲಿ ಸಂತೋಷ್ನನ್ನು ಕೆಲಸದಿಂದ ಹೋಟೆಲ್ ಮಾಲೀಕ ತೆಗೆದುಹಾಕಿದ್ದ. ಇದೇ ಜಿದ್ದಿನಲ್ಲಿ ಗೆಳೆಯನ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ, ಶುಕ್ರವಾರ ರಾತ್ರಿ ಮದ್ಯ ಸೇವಿಸುವ ನೆಪದಲ್ಲಿ ಕರೆಸಿಕೊಂಡು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ