ಮದ್ವೆಯಾಗಲು ಹುಡ್ಗಿ ಸಿಗ್ಲಿಲ್ಲವೆಂದು ಜೀವ ಬಿಟ್ಟ ಹುಡ್ಗ

Published : Aug 17, 2020, 08:47 PM IST
ಮದ್ವೆಯಾಗಲು ಹುಡ್ಗಿ ಸಿಗ್ಲಿಲ್ಲವೆಂದು ಜೀವ ಬಿಟ್ಟ ಹುಡ್ಗ

ಸಾರಾಂಶ

ಮದುವೆ ಮಾಡಿಕೊಳ್ಳಲು ಹುಡುಗಿ ಸಿಗಲಿಲ್ಲವೆಂಬ ಕಾರಣಕ್ಕೆ ಯುವಕನೋರ್ವ ಜೀವವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ.

ಶಿರಸಿ, (ಆ.17): ಮದುವೆಯಾಗಲು ವಧು ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೋರ್ವ  ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊರವಲದ ಚಿಪಗಿ ಬೆಟ್ಟದಲ್ಲಿ ನಡೆದಿದೆ. 

ಸಹ್ಯಾದ್ರಿ ಕಾಲೋನಿಯ ಮಂಜುನಾಥ ಭೋವಿ (34) ಮೃತಪಟ್ಟ ದುರ್ದೈವಿ.  ಮಂಜುನಾಥನಿಗೆ 34 ವಯಸ್ಸಾಯ್ತು ಇನ್ನೇನು ಮದುವೆ ಮಾಡಿಕೊಳ್ಳುವುದಕ್ಕೆ ಕಳೆದ 4 ವರ್ಷದಿಂದ  ಹುಡುಗಿ ಹುಡುಕುತ್ತಿದ್ದ.

ಪುಂಡರ ವಿರುದ್ಧ ಕ್ರಮಕ್ಕೆ ಮುಂದಾದ ಸಿಎಂ, ಕಂಗನಾ ಮಾತಿಗೆ ಸೊನಾಕ್ಷಿ ಗರಂ: ಆ.17ರ ಟಾಪ್ 10 ಸುದ್ದಿ! 

ಆದ್ರೆ, ಹುಡುಗಿ ಸಿಗದ ಕಾರಣ ಜಿಗುಪ್ಸೆಗೊಂಡು ಇಂದು (ಸೋಮವಾರ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಈಗಿನ ಕಾಲದಲ್ಲಿ ಮದ್ವೆಯಾಗಲು ಹೆಣ್ಣು ಸಿಗುತ್ತಿಲ್ಲ. ಈಗಾಗಿ .ಉಲ್ಟಾ ಹೆಣ್ಣಿಗೆ ವರದಕ್ಷಿಣೆ ಕೊಟ್ಟು ಮದ್ವೆ ಮಾಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಇದ್ರೂ ಇನ್ನೊಂದೆಡೆ ಹಲವು ತಾಯಂದಿರು ಗಂಡು ಮಗು ಬೇಕು, ಗಂಡು ಬೇಕು ಎನ್ನುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ