
ಚಾಮರಾಜನಗರ(ನ.16): ಚಲಿಸುತ್ತಿದ್ದ ಬಸ್ ಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಚಾಮರಾಜನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದ ರಂಗಸ್ವಾಮಿ(34) ಮೃತ ದುರ್ದೈವಿ.
ಚಾಮರಾಜನಗರ ಬಸ್ ನಿಲ್ದಾಣದಿಂದ ಮೈಸೂರಿನತ್ತ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ರಂಗಸ್ವಾಮಿ ಹಿಂಬದಿ ಚಕ್ರಕ್ಕೆ ಹಾರಿದ್ದಾನೆ. ಇದನ್ನು ಚಾಲಕ ಗಮನಿಸಿ ಬ್ರೇಕ್ ಹಾಕಿದರಾದರೂ ಈತನ ಮೇಲೆ ಚಕ್ರ ಉರುಳಿದ್ದರಿಂದ ಸ್ಥಳದಲ್ಲೇ ಅಸುನೀಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಡೆತ್ನೋಟ್ ಬರೆದಿಟ್ಟು ಬ್ರಹ್ಮಕುಮಾರಿ ಆಶ್ರಮದಲ್ಲಿ ಸಾವಿಗೆ ಶರಣಾದ ಸೋದರಿಯರು
ಈ ಘಟನೆಯನ್ನು ಕಂಡ ಸಾರ್ವಜನಿಕರು ಕ್ಷಣ ಕಾಲ ವಿಚಲಿತರಾಗಿದ್ದಾರೆ. ಮಾಹಿತಿ ಅರಿತ ಚಾಮರಾಜನಗರ ಟ್ರಾಫಿಕ್ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇನ್ನು,ಆತ್ಮಹತ್ಯೆ ದೃಶ್ಯ ಅಂಗಡಿಯೊಂದರ ಮುಂಭಾಗ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ