
ಶಿವಮೊಗ್ಗ(ಜೂ.05): 35 ವರ್ಷದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ.
ಮೂಲತಃ ಆನೆಗದ್ದೆ ಗ್ರಾಮದ ಮೃತ ಮಹಿಳೆ ಬೆಂಗಳೂರಿನಲ್ಲಿ ನೆಲೆಸಿದ್ದರು. 13 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಈಕೆ ಇತ್ತೀಚೆಗೆ ಗಂಡನನ್ನು ತೊರೆದಿದ್ದಳು. ಇವರಿಗೆ 6 ವರ್ಷದ ಮಗುವಿದೆ ಎಂದು ತಿಳಿದು ಬಂದಿದೆ.
ಚಾಮರಾಜನಗರ : ಒಂದೇ ಕುಟುಂಬದ ನಾಲ್ವರೂ ಅತ್ಮಹತ್ಯೆಗೆ ಶರಣು
ಕೊರೋನಾ ಹಿನ್ನಲೆಯಲ್ಲಿ ಊರಿಗೆ ಬಂದು ತಾಯಿ, ತಂಗಿ ಮತ್ತು ಓರ್ವ ಮಗಳ ಜೊತೆ ನೆಲೆಸಿದ್ದಳು. ಮೃತ ಅತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತ ಮಹಿಳೆ ಮದ್ಯ ವ್ಯಸನಿಯಾಗಿದ್ದಳು ಎನ್ನಲಾಗಿದೆ. ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ