ಕಾರವಾರ: ಪಿಎಸ್‌ಐನಿಂದ ಮಾನಸಿಕ ಕಿರುಕುಳ ಆರೋಪ, ಠಾಣೆ ಎದುರೇ ಯುವಕ ಆತ್ಮಹತ್ಯೆಗೆ ಯತ್ನ

Published : Jun 14, 2024, 01:55 PM IST
ಕಾರವಾರ: ಪಿಎಸ್‌ಐನಿಂದ ಮಾನಸಿಕ ಕಿರುಕುಳ ಆರೋಪ, ಠಾಣೆ ಎದುರೇ ಯುವಕ ಆತ್ಮಹತ್ಯೆಗೆ ಯತ್ನ

ಸಾರಾಂಶ

ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್ ಪೆಟ್ರೋಲ್ ಸುರಿದುಕೊಂಡು  ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪಿಎಸ್ಐ ವಿರುದ್ಧ ವಿಡಿಯೋ ಮಾಡಿ ಭಾಸ್ಕರ್ ಆರೋಪ ಮಾಡಿದ್ದಾನೆ.   

ಕಾರವಾರ(ಜೂ.14):  ಪಿಎಸ್‌ಐ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮದ್ಯದ ಅಮಲಿನಲ್ಲಿ ಪೆಟ್ರೋಲ್ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. 

ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಭಾಸ್ಕರ್ ಬೋಂಡೆಲ್ಕರ್ (36) ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ. ಪಿಎಸ್ಐ ಬಸವರಾಜ್ ಮಗನೂರು ಜೂಜಾಟ ಆರೋಪದಡಿ ಭಾಸ್ಕರ್ ಬೋಂಡೆಲ್ಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಿನ್ನೆ ದಿನ ಜಮೀನು ವಿಚಾರದಲ್ಲಿ ಭಾಸ್ಕರ್ ಮದ್ಯ ಸೇವಿಸಿ ಬೈಕ್ ನಲ್ಲಿ ಠಾಣೆಗೆ ತೆರಳಿದ್ದನು. ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಸೂಚಿಸಿದ್ದರು. 

ಅಮೆರಿಕದ ಮಹಿಳೆಗೆ ಮಹಾಮೋಸ, 300 ರೂಪಾಯಿ ಆಭರಣ 6 ಕೋಟಿಗೆ ಮಾರಾಟ!

ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್ ಪೆಟ್ರೋಲ್ ಸುರಿದುಕೊಂಡು  ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪಿಎಸ್ಐ ವಿರುದ್ಧ ವಿಡಿಯೋ ಮಾಡಿ ಭಾಸ್ಕರ್ ಆರೋಪ ಮಾಡಿದ್ದಾನೆ. ಜೂಜಾಟದಲ್ಲಿ ಸಿಕ್ಕಿ ಬಿದ್ದಾಗ 3,60,00 ರೂ. ಅನ್ನು 36,000 ರೂ. ಎಂದು ಪೊಲೀಸರು ತೋರಿಸಿದ್ರು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದೆ. ತಾನೀಗ ಚಾಲಕ ವೃತ್ತಿ ನಡೆಸುತ್ತಿದ್ದು, ರಾಮನಗರ ತೆರಳಿದಾಗ ಮತ್ತೆ ಪೊಲೀಸರು ಕಿರುಕುಳ ನೀಡಿದ್ದಾರೆ. ಈ ಕಾರಣದಿಂದ ಆತ್ಮಹತ್ಯೆ ನಡೆಸಲು ಯತ್ನಿಸಿದ್ದೇನೆ ಎಂದು ಭಾಸ್ಕರ್ ಹೇಳಿದ್ದನೆ. ಬೆಂಕಿಯಿಂದ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ