ಕೊರೋನಾ ಪಾಸಿಟಿವ್; ಆಸ್ಪತ್ರೆಯಿಂದ ಜಿಗಿದು ಪತ್ರಕರ್ತ ಆತ್ಮಹತ್ಯೆ

Published : Jul 06, 2020, 11:21 PM IST
ಕೊರೋನಾ ಪಾಸಿಟಿವ್; ಆಸ್ಪತ್ರೆಯಿಂದ ಜಿಗಿದು ಪತ್ರಕರ್ತ ಆತ್ಮಹತ್ಯೆ

ಸಾರಾಂಶ

ಕೊರೋನಾ ಸೋಂಕಿತ ಪತ್ರಕರ್ತ ಆತ್ಮಹತ್ಯೆ/ ದೆಹಲಿ ಏಮ್ಸ್ ನಿಂದ ಜಿಗಿದ ಕೊರೋನಾ ಸೋಂಕಿತ ಪತ್ರಕರ್ತ/ ಖಿನ್ನತೆಗೆ ಒಳಗಾಗಿದ್ದರು/ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ

ನವದೆಹಲಿ (ಜು. 06) ಕೊರೋನಾ ಸೋಂಕಿತ, ಪ್ರಮುಖ ಹಿಂದಿ ದಿನಪತ್ರಿಕೆಯೊಂದರ 37 ವರ್ಷದ ಪತ್ರಕರ್ತರೊಬ್ಬರು ಆಸ್ಪತ್ರೆ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯ ಏಮ್ಸ್ ಆಸ್ಪತ್ರೆಯ ನಾಲ್ಕನೆ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಏಮ್ಸ್ ಐಸಿಯುಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ.

ರಾಘವೇಂದ್ರ ಬ್ಯಾಂಕ್ ವಾಸುದೇವ ಮಯ್ಯ ಆತ್ಮಹತ್ಯೆ

ಆತ್ಮಹತ್ಯೆ  ಮಾಡಿಕೊಂಡ ಪತ್ರಕರ್ತಗೆ ಕೊರೋನಾ ಪಾಸಿಟಿವ್ ಇತ್ತು. ಕೆಲ ದಿನಗಳ ಹಿಂದೆ ಮೆದುಳಿನ ಚಿಕಿತ್ಸೆಗೂ ಒಳಗಾಗಿದ್ದರು. ಕೊರೋನಾ ಕಾಣಿಸಿಕೊಂಡ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದರು.  ಖಿನ್ನತೆಗೆ ಒಳಗಾಗಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ತರುಣ್ ಸಿಸೋಡಿಯಾ ಹಿಂದಿ ದೈನಿಕವೊಂದರಲ್ಲಿ ಕೆಲಸ ಮಾಡುತ್ತಿದ್ದು ಈಶಾನ್ಯ ದೆಹಲಿಯಲ್ಲಿ ವಾಸವಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!