ಶಿವಮೊಗ್ಗ: ಚಡ್ಡಿ ಜೇಬಿನೊಳಗೆ ಕೈ ಹಾಕಿ 37 ಸಾವಿರ ಎಗರಿಸಿದ ಚಾಲಾಕಿ ಕಳ್ಳ..!

Published : Dec 19, 2023, 10:15 PM IST
ಶಿವಮೊಗ್ಗ: ಚಡ್ಡಿ ಜೇಬಿನೊಳಗೆ ಕೈ ಹಾಕಿ 37 ಸಾವಿರ ಎಗರಿಸಿದ ಚಾಲಾಕಿ ಕಳ್ಳ..!

ಸಾರಾಂಶ

ಹೊಸಪೇಟೆ ಮಾರ್ಗದ ಬಸ್ ಹತ್ತುವ ಸಂದರ್ಭ ರಶ್ ಹೆಚ್ಚಾಗಿತ್ತು. ಈ ವೇಳೆ ಚೌಡಪ್ಪ ಅವರ ಚೆಡ್ಡಿ ಜೇಬಿಗೆ ಯಾರೋ ಕೈ ಹಾಕಿದಂತಾಗಿದೆ. ಬಳಿಕ ಪರಿಶೀಲಿಸಿದಾಗ ₹37 ಸಾವಿರ ಹಣ ಜೇಬಲ್ಲಿ ಇರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶಿವಮೊಗ್ಗ(ಡಿ.19): ಬಸ್ ಹತ್ತುವ ಸಂದರ್ಭ ಕೂಲಿ ಕಾರ್ಮಿಕನೊಬ್ಬನ ಚಡ್ಡಿ ಜೇಬಿನಲ್ಲಿದ್ದ ₹37 ಸಾವಿರ ಹಣ ಕಳವು ಮಾಡಿರುವ ಘಟನೆ ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆ ಹರಪನಹಳ್ಳಿಯ ಆಲೂರು ಚೌಡಪ್ಪ ಎಂಬವರು ಹಣ ಕಳೆದುಕೊಂಡ ವ್ಯಕ್ತಿ. ಬಾಳೆಹೊನ್ನೂರಿನ ಕಾಫಿ ಎಸ್ಟೇಟ್‌ನಲ್ಲಿ ಆಲೂರು ಚೌಡಪ್ಪ ಅವರ ಮಕ್ಕಳು ಕೆಲಸ ಮಾಡುತ್ತಿದ್ದಾರೆ. ಅವರನ್ನು ಭೇಟಿಯಾಗಿ ತಮ್ಮೂರಿಗೆ ಮರಳಲು ಪತ್ನಿ ಮತ್ತು ಸಂಬಂಧಿಯೊಂದಿಗೆ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಬಂದಿದ್ದರು.

ಪ್ರೀತಿಯ ಹೆಸರಿನಲ್ಲಿ ಸೆಕ್ಸ್-ದೋಖಾ! ತಾನು ಅನುಭವಿಸಿ ಸ್ನೇಹಿತರ ಜೊತೆಗೂ ಮಲಗಿಸಿದ ಕಿರಾತಕ!

ಹೊಸಪೇಟೆ ಮಾರ್ಗದ ಬಸ್ ಹತ್ತುವ ಸಂದರ್ಭ ರಶ್ ಹೆಚ್ಚಾಗಿತ್ತು. ಈ ವೇಳೆ ಚೌಡಪ್ಪ ಅವರ ಚೆಡ್ಡಿ ಜೇಬಿಗೆ ಯಾರೋ ಕೈ ಹಾಕಿದಂತಾಗಿದೆ. ಬಳಿಕ ಪರಿಶೀಲಿಸಿದಾಗ ₹37 ಸಾವಿರ ಹಣ ಜೇಬಲ್ಲಿ ಇರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂಘದ ಸಾಲದ ಕಂತು ಮರುಪಾವತಿಗೆ ಚೌಡಪ್ಪ ಅವರ ಮಕ್ಕಳು ಹಣ ಕೊಟ್ಟಿದ್ದರು. ಆ ಹಣ ಕಳುವಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ